ಆಮ್ ಆದ್ಮಿ ಪಕ್ಷ ಕಾನೂನು ಘಟಕದ ಅಧ್ಯಕ್ಷರಾಗಿ ವಕೀಲ ನಂಜಪ್ಪ ಕಾಳೇಗೌಡ ನೇಮಕ

Update: 2020-06-30 08:02 GMT

ಬೆಂಗಳೂರು : ವಕೀಲ ವೃತ್ತಿಯ ಮೂಲಕ ಗುರುತಿಸಿಕೊಂಡಿರುವ ನಂಜಪ್ಪ ಕಾಳೇಗೌಡ ಅವರನ್ನು ಆಮ್ ಆದ್ಮಿ ಪಕ್ಷ ಕಾನೂನು ಘಟಕದ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ದೇವರಹಳ್ಳಿಯ ರೈತಾಪಿ ಕುಟುಂಬದಲ್ಲಿ ಬೆಳೆದು ನಂತರ ಬೆಂಗಳೂರಿನಲ್ಲಿ ಕಾಲೇಜು ಶಿಕ್ಷಣ, ಎಲ್‌ಎಲ್‌ಬಿ ನಂತರ ರಾಜ್ಯಶಾಸ್ತ್ರದಲ್ಲಿ ಎಂ.ಎ ಸ್ನಾತಕೋತ್ತರ ಪದವಿ ಪಡೆದರು.

ವಿದ್ಯಾರ್ಥಿ ದೆಸೆಯಿಂದಲೇ ಎನ್‌ಸಿಸಿಯಲ್ಲಿ ಗುರುತಿಸಿಕೊಂಡಿದ್ದ ಇವರು ಹಲವಾರು ಕ್ಯಾಂಪ್‌ಗಳಲ್ಲಿ ಭಾಗವಹಿಸಿದ್ದಾರೆ. ಅಲ್ಲದೇ 1992 ರಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಕರ್ನಾಟಕ ಮತ್ತು ಗೋವಾ ರೆಜಿಮೆಂಟಿನ ಸೀನಿಯರ್ ಅಂಡರ್ ಆಫೀಸರ್ ಆಗಿ ಭಾಗವಹಿಸಿರು ವುದು ಇವರ ಹೆಗ್ಗಳಿಕೆ ಆಗಿದೆ.

ಸಾಹಿತ್ಯ ಆಸಕ್ತರಾದ ಇವರು ರಾಜರಾಜೇಶ್ವರಿ ನಗರ ಲಯನ್ಸ್ ಕ್ಲಬ್ ಸಂಸ್ಥಾಪಕ ಕಾರ್ಯದರ್ಶಿ ಹಾಗೂ ವಕೀಲ ಸಾಹಿತ್ಯ ಕೂಟದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ನ್ಯಾಯಮಿತ್ರ ಸಹಕಾರ ಸಂಘದ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News