ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಸಿಆರ್‌ಪಿಎಫ್ ಯೋಧ,ನಾಗರಿಕ ಮೃತ

Update: 2020-07-01 06:07 GMT

ಶ್ರೀನಗರ/ಹೊಸದಿಲ್ಲಿ,ಜು.1:ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಉಗ್ರರು ನಾಕಾ ಪಾರ್ಟಿ ಮೇಲೆ ದಾಳಿ ನಡೆಸಿದ ಪರಿಣಾಮ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್) ಯೋಧ ಹಾಗೂ ಓರ್ವ ನಾಗರಿಕ ಮೃತಪಟ್ಟಿದ್ದಾರೆ. ಮೂವರು ಸಿಆರ್‌ಪಿಎಫ್ ಯೋಧರು ಗಾಯಗೊಂಡಿದ್ದಾರೆ.

ಶ್ರೀನಗರದಿಂದ ಸುಮಾರು 50 ಕಿ.ಮೀ.ದೂರದಲ್ಲಿರುವ ಬಾರಾಮುಲ್ಲಾ ಜಿಲ್ಲೆಯ ಸೋಪೊರ್ ನಗರದಲ್ಲಿ ಭಯೋತ್ಪಾದಕರು ಸಿಆರ್‌ಪಿಎಫ್ ಪಟ್ರೋಲ್ ಪಾರ್ಟಿ ಮೇಲೆ ಗುಂಡಿನ ದಾಳಿ ನಡೆಸಿದರು. ಸಿಆರ್‌ಪಿಎಫ್ ಯೋಧರು ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದರೂ ಉಗ್ರರು ಪರಾರಿಯಾಗಿದ್ದಾರೆ. ದಾಳಿಯಲ್ಲಿ ನಾಲ್ವರು ಯೋಧರು ಗಾಯಗೊಂಡಿದ್ದು, ಓರ್ವ ಗಂಭೀರ ಗಾಯದಿಂದಾಗಿ ಮೃತಪಟ್ಟಿದ್ದಾರೆ. ತನ್ನ ಮಕ್ಕಳೊಂದಿಗೆ ಕಾರ್‌ನಲ್ಲಿದ್ದ ವ್ಯಕ್ತಿಯ ಮೇಲೆಯೂ ಉಗ್ರರು ದಾಳಿ ನಡೆಸಿದ್ದು, ಅವರು ಸ್ಥಳದಲ್ಲೇ ಮೃತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News