ಮಂಗಳೂರು: ಜು.3ರಿಂದ ಡಿಸಿ ಕಚೇರಿ ಸಂಕೀರ್ಣಕ್ಕೆ ಸಾರ್ವಜನಿಕ ಪ್ರವೇಶ ನಿಷಿದ್ಧ

Update: 2020-07-01 15:26 GMT
ಸಿಂಧೂ ರೂಪೇಶ್

ಮಂಗಳೂರು, ಜು.1: ದ.ಕ. ಜಿಲ್ಲಾಧಿಕಾರಿ ಕಚೇರಿಯ ಸಂಕೀರ್ಣದಲ್ಲಿರುವ ಕಚೇರಿಗಳಿಗೆ ಜು.3ರಿಂದ 5ರವರೆಗೆ ಸಾರ್ವಜನಿಕರ ಪ್ರವೇಶವನ್ನು ಕಡ್ಡಾಯವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

ಡಿಸಿ ಕಚೇರಿಯ ಸಂಕೀರ್ಣದಲ್ಲಿರುವ ಸಂಸದರು, ಸಚಿವರ ಕಚೇರಿ ಸೇರಿದಂತೆ ಎಲ್ಲ ಕಚೇರಿಗಳನ್ನು ಸಂಪೂರ್ಣವಾಗಿ ಸ್ಯಾನಿಟೈಝ್ ಮಾಡುವ ಕಾರ್ಯ ನಡೆಯಲಿದೆ. ಸಾರ್ವಜನಿಕರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News