ಮಹೇಂದ್ರ ಕುಮಾರ್ ಕೊಪ್ಪ ಸ್ಮರಣಾರ್ಥ ಸುರತ್ಕಲ್ ನಲ್ಲಿ ರಕ್ತದಾನ ಶಿಬಿರ

Update: 2020-07-02 05:32 GMT

ಮಂಗಳೂರು : ದಿ. ಮಹೇಂದ್ರ ಕುಮಾರ್ ಅಭಿಮಾನಿ ಬಳಗ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ಜಂಟಿ ಆಶ್ರಯದಲ್ಲಿ 
ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ಸಹಭಾಗಿತ್ವದಲ್ಲಿ ದಿ. ಮಹೇಂದ್ರ ಕುಮಾರ್ ಕೊಪ್ಪ ಸವಿ ನೆನಪಿಗಾಗಿ ಸಾರ್ವಜನಿಕ ರಕ್ತದಾನ ಶಿಬಿರವು ಸುರತ್ಕಲ್ ಜಂಕ್ಷನ್ ನಲ್ಲಿ ಬುಧವಾರ ಜರುಗಿತು.

ಕೊರೋನ ಭೀತಿಯ ನಡುವೆಯೂ ಯಶಸ್ವಿಯಾಗಿ ನಡೆದ ರಕ್ತದಾನ ಶಿಬಿರದಲ್ಲಿ ಎಲ್ಲಾ ಸುರಕ್ಷಿತಾ ಮುನ್ನೆಚ್ಚರಿಕೆಯನ್ನು ಪಾಲಿಸಿ ಕೊಂಡು ಒಟ್ಟು 75 ಮಂದಿ ರಕ್ತದಾನ ಮಾಡಿ ಜೀವದಾನಿಯಾದರು. ದಾನಿಗಳಿಂದ ರಕ್ತ ಸಂಗ್ರಹಿಸುವಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಮಂಗಳೂರು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಸಹಕರಿಸಿದರು.

ಕಾರ್ಯಕ್ರಮದಲ್ಲಿ ರಮೀಝ್ ಕಿನ್ನಿಗೋಳಿ, ಶೌಕತ್ ಸುರತ್ಕಲ್, ಫಾಝಿಲ್ ಸುರತ್ಕಲ್, ಹಫೀಝ್ ಸುರತ್ಕಲ್, ಶಾಹೀಲ್ ಸುರತ್ಕಲ್ ಹಾಗೂ  ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ ಕಾರ್ಯ ನಿರ್ವಾಹಕರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News