ಜು.31ರವರೆಗೆ ಸಂದರ್ಶಕರಿಗೆ ಪಿಲಿಕುಳ ಪ್ರವೇಶ ನಿರ್ಬಂಧ

Update: 2020-07-02 11:14 GMT

ಮಂಗಳೂರು : ಕೊರೋನ ಜಿಲ್ಲೆಯಾದ್ಯಂತ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಪಿಲಿಕುಳ ನಿಸರ್ಗಧಾಮದೊಳಗೆ ಜು.4ರಿಂದ ಜು.31ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಕೊರೋನಾ ವೈರಾಣು ಸಮಸ್ಯೆ ಹಾಗೂ ಮಳೆಗಾಲದ ಕಾರಣದಿಂದ ಪಿಲಿಕುಳ ನಿಸರ್ಗಧಾಮಕ್ಕೆ ಸಂದರ್ಶಕರ ಭೇಟಿಯು ಅತ್ಯಲ್ಪವಾಗಿದೆ. ಆದ್ದರಿಂದ ಜು.31ರವರೆಗೆ ಸಂದರ್ಶಕರ ಭೇಟಿಗೆ ಅವಕಾಶವಿರುವುದಿಲ್ಲ ಎಂದು ಪಿಲಿಕುಳ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News