ಗುತ್ತಿಗೆ ವೈದ್ಯರ ವೇತನ ಹೆಚ್ಚಳಕ್ಕೆ ರಾಜ್ಯ ಸರಕಾರ ಆದೇಶ

Update: 2020-07-02 12:18 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜು. 2: ರಾಜ್ಯದ ಗ್ರಾಮೀಣ ಭಾಗ ಸೇರಿದಂತೆ ತಾಲೂಕು, ಜಿಲ್ಲಾ ಕೇಂದ್ರ, ನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರಿಗೆ ತಕ್ಷಣದಿಂದಲೇ ಜಾರಿಗೆ ಬರುವಂತೆ ವೇತನವನ್ನು 45 ಸಾವಿರ ರೂ.ಗಳಿಂದ 60 ಸಾವಿರ ರೂ.ಗಳಿಗೆ ಪರಿಷ್ಕರಣೆ ಮಾಡಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಸದರಿ ಎಂಬಿಬಿಎಸ್ ಗುತ್ತಿಗೆ ವೈದ್ಯರ ಸೇವೆಯನ್ನು ಖಾಯಂಗೊಳಿಸುವ ಬೇಡಿಕೆಗೆ ಆಸ್ಪದ ನೀಡುವಂತಿಲ್ಲ ಎಂಬ ಷರತ್ತು ವಿಧಿಸಲಾಗಿದೆ. ಕೆಪಿಎಸ್ಸಿಯಿಂದ ಖಾಯಂ ವೈದ್ಯರು ನೇಮಕಗೊಳ್ಳುವವರೆಗೆ ಗುತ್ತಿಗೆ ಆಧಾರದ ಮೇಲೆ ವೈದ್ಯರ ನೇಮಕ ಮಾಡಿಕೊಳ್ಳಲು ಆಯಾ ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಆದೇಶದಲ್ಲಿ ಉಲ್ಲೇಖ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News