ವಿಜಯಪುರ: ವಿಪ್ ಉಲ್ಲಂಘಿಸಿ ಕಾಂಗ್ರೆಸ್‍ಗೆ ಮತ ನೀಡಿದ ಬಿಜೆಪಿ ಸದಸ್ಯರ ಉಚ್ಚಾಟನೆ

Update: 2020-07-02 14:49 GMT

ವಿಜಯಪುರ, ಜು.2 ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ನಡೆದ  ಚುನಾವಣೆ ಪ್ರಕ್ರಿಯೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ, ಕಾಂಗ್ರೆಸ್‍ಗೆ ಮತ ನೀಡಿದ  ನಾಲ್ವರು ಸದಸ್ಯರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಬಿಜೆಪಿ ಉಚ್ಚಾಟಿಸಿದೆ.

ಇಲ್ಲಿನ ಯಂಕಂಚಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯ ಮಹಾಂತಗೌಡ ಪಾಟೀಲ, ಮೊರಟಗಿ ಕ್ಷೇತ್ರದ ಬಿಂದುರಾಯಗೌಡ ಬಿರಾದಾರ, ಇಂಗಳೇಶ್ವರ ಕ್ಷೇತ್ರದ ಕಲ್ಲಪ್ಪ ಮಟ್ಟಿ ಮತ್ತು ಕೊಣ್ಣುರು ಕ್ಷೇತ್ರದ ಜ್ಯೋತಿ ಅಸ್ಕಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷ ಉಚ್ಚಾಟಿಸಲಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್. ಪಾಟೀಲ ಕೂಚಬಾಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News