ದ.ಕ. ಜಿಲ್ಲೆ-ಕಾಸರಗೋಡು ಗಡಿ ಪ್ರದೇಶ ಮುಚ್ಚುಗಡೆ ವದಂತಿ ಬಗ್ಗೆ ಜಿಲ್ಲಾಧಿಕಾರಿಯಿಂದ ಸ್ಪಷ್ಟನೆ

Update: 2020-07-02 16:37 GMT
ಸಾಂದರ್ಭಿಕ ಚಿತ್ರ

ಕಾಸರಗೋಡು: ಜಿಲ್ಲೆಯ ಗಡಿ ಪ್ರದೇಶಗಳನ್ನು ಹೊಸದಾಗಿ ಮುಚ್ಚುಗಡೆ ನಡೆಸಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಸ್ಪಷ್ಟಪಡಿಸಿ ದ್ದಾರೆ. ಈ ಸಂಬಂಧ ಜಿಲ್ಲಾಡಳಿತ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದವರು ಹೇಳಿದರು.

ಕಾಸರಗೋಡು ಜಿಲ್ಲೆಯ ಗಡಿಗಳನ್ನು ಹೊಸದಾಗಿ ಮುಚ್ಚುಗಡೆ ನಡೆಸಲಾಗಿದೆ ಎಂಬ ಬಗ್ಗೆ ಸುಳ್ಳು ಪ್ರಚಾರ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಈ ಸ್ಪಷ್ಟೀಕರಣ ನೀಡಿರುವುದಾಗಿ ಅವರು ಹೇಳಿದ್ದಾರೆ.

ಕೋವಿಡ್ ಪ್ರತಿರೋಧ ಚಟುವಟಿಕೆಗಳ ಅಂಗವಾಗಿ ಈ ಹಿಂದೆಯೇ ಗಡಿ ಪ್ರದೇಶಗಳನ್ನು ಮುಚ್ಚುಗಡೆ ನಡೆಸಲಾಗಿದ್ದು, ಈಗಲೂ ಅದೇ ರೀತಿ ಮುಂದುವರಿಯುತ್ತಿದೆ. ಅದಲ್ಲದೆ ಹೊಸದಾಗಿ ಯಾವುದೇ ಮುಚ್ಚುಗಡೆಗೆ ಜಿಲ್ಲಾಡಳಿತ ಕ್ರಮ  ಕೈಗೊಂಡಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಕಾಸರಗೋಡು ಮತ್ತು ಮಂಗಳೂರು ಗಡಿ ಪ್ರದೇಶ ಮುಚ್ಚುಗಡೆಗೆ ಸಂಬಂಧಿಸಿ ದ.ಕ. ಜಿಲ್ಲಾಡಳಿತದಿಂದ ಯಾವುದೇ ರೀತಿಯ ತೀರ್ಮಾನ ಆಗಿಲ್ಲ. ಯಥಾ ಸ್ಥಿತಿ ಮುಂದುವರಿಯಲಿದೆ ಎಂದು ದ.ಕ. ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News