ಕಡೂರಿನ ಕೊರೋನ ಸೋಂಕಿತ ಶಿವಮೊಗ್ಗ ಆಸ್ಪತ್ರೆಯಲ್ಲಿ ಮೃತ್ಯು

Update: 2020-07-02 16:04 GMT

ಚಿಕ್ಕಮಗಳೂರು, ಜು.2: ಕಾಫಿನಾಡಿನ ವ್ಯಕ್ತಿಯೊಬ್ಬರು ಶಿವಮೊಗ್ಗದಲ್ಲಿ ಕೊರೋನ ಸೋಂಕಿಗೆ ತುತ್ತಾಗಿ ಅಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದು, ಮೃತ ವ್ಯಕ್ತಿಯಿಂದ 19 ವರ್ಷದ ಮಗನಿಗೂ ಸೋಂಕು ತಗುಲಿರುವ ಪ್ರಕರಣ ಗುರುವಾರ ಪ್ರಯೋಗಾಲಯದ ವರದಿಯಿಂದ ತಿಳಿದುಬಂದಿದೆ.

ಕಡೂರು ಪಟ್ಟಣದ ವ್ಯಕ್ತಿಯೊಬ್ಬರು ಶಿವಮೊಗ್ಗಕ್ಕೆ ತೆರಳಿದ್ದ ವೇಳೆ ಸೋಂಕಿಗೆ ತುತ್ತಾಗಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಈ ವ್ಯಕ್ತಿ  ಚಿಕಿತ್ಸೆಗೆ ಸ್ಪಂದಿಸದೇ ಗುರುವಾರ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದು, ಮೃತ ವ್ಯಕ್ತಿಯ ಮಗ ಹಾಗೂ ಪ್ರಾಥಮಿಕ ಸಂಪರ್ಕವಾಗಿದ್ದ 19 ವರ್ಷದ ಯುವಕನ್ನೂ ಸೋಂಕು ಇರುವುದು ಪ್ರಯೋಗಾಲಯದ ವರದಿಯಿಂದ ದೃಢಪಟ್ಟಿದೆ.

ಸೋಂಕಿತ ಯುವಕನನ್ನು ಗುರುವಾರ ಚಿಕ್ಕಮಗಳೂರು ನಗರದ ಕೋವಿಡ್-19 ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದ್ದು, ಗುರುವಾರ ನಗರದಲ್ಲಿ ಪತ್ತೆಯಾದ ಒಂದು ಪ್ರಕರಣ ಸೇರಿದಂತೆ ಜಿಲ್ಲೆಯಲ್ಲಿರುವ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 42 ಆಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News