ಕೆಲಸಕ್ಕೆಂದು ತೆರಳಿದ್ದ ಯುವಕ ನಾಪತ್ತೆ: ದೂರು

Update: 2020-07-03 08:28 GMT

ಪುತ್ತೂರು: ಕಳೆದ 9 ತಿಂಗಳ ಹಿಂದೆ ಕೇರಳಕ್ಕೆ ಕೆಲಸಕ್ಕೆಂದು ಹೋಗಿದ್ದ ಪುತ್ತೂರು ತಾಲೂಕಿನ ಕೊಡಿಪ್ಪಾಡಿ ನಿವಾಸಿ ಯುವಕನೊಬ್ಬ ಮನೆಗೆ ಹಿಂದಿರುಗದೆ ನಾಪತ್ತೆಯಾಗಿರುವುದಾಗಿ ನಗರ ಪೊಲೀಸರಿಗೆ ದೂರು ನೀಡಲಾಗಿದೆ. 

ಕೊಡಿಪ್ಪಾಡಿ ನಿವಾಸಿ ನಾರಾಯಣ ನಾಯ್ಕ ಎಂಬವರ ಪುತ್ರ ರಕ್ಷಿತ್ ಕುಮಾರ್(27) ನಾಪತ್ತೆಯಾದ ಯುವಕ. ಈತ 2019 ನವಂಬರ್ ತಿಂಗಳಲ್ಲಿ ಗಾರೆ ಕೆಲಸಕ್ಕೆಂದು ಕೇರಳ ರಾಜ್ಯದ ಕಾಸರಗೋಡು ಎಂಬಲ್ಲಿಗೆ ಹೋಗಿದ್ದು, ಈ ನಡುವೆ 2 ಬಾರಿ ಮನೆಗೆ ಕರೆ ಮಾಡಿ ಮಾತನಾಡಿದ್ದರು. ಬಳಿಕ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆತನ ಮೊಬೈಲ್‍ಗೆ ಕರೆ ಮಾಡಿದಾಗ ಅದು ಸ್ವಿಚ್ ಆಫ್ ಎಂದು ಬರುತ್ತಿದೆ ಎಂದು ಆತನ ಸಹೋದರ ಮನೋಜ್ ಕುಮಾರ್ ಎಂಬವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. 

ಪುತ್ತೂರು ನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News