ದ.ಕ. ಜಿಲ್ಲೆಯಲ್ಲಿ ಕೊರೋನ ವೈರಸ್ ಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 19ಕ್ಕೆ ಏರಿಕೆ

Update: 2020-07-03 15:33 GMT

ಮಂಗಳೂರು, ಜೂ.3: ದ.ಕ. ಜಿಲ್ಲೆಯಲ್ಲಿ ಕೊರೋನ ವೈರಸ್ ಮರಣ ಮೃದಂಗ ಮುಂದುವರಿದಿದ್ದು, ಸೋಂಕಿನಿಂದ ಮತ್ತೊಬ್ಬ ಪುರುಷ ಮೃತಪಟ್ಟಿದ್ದಾರೆ. ಈ ಮೂಲಕ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

47 ವರ್ಷದ ಮೃತ ವ್ಯಕ್ತಿಯು ಖಾಸಗಿ ಆಸ್ಪತ್ರೆಯಿಂದ ಜು.2ರಂದು ಮಂಗಳೂರಿನ ವೆನ್ಲಾಕ್ ಕೊವೀಡ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಇವರು ಅಧಿಕ ರಕ್ತದೊತ್ತಡ, ಮಧುಮೇಹ, ಮೇದೋಜಿರಕದ ಉರಿಯೂತ, ಮೂತ್ರಪಿಂಡದ ವೈಫಲ್ಯ, ಆಲ್ಕೊಹಾಲಿಕ್ ಲಿವರ್ ರೋಗ, ಮಲ್ಟಿ ಆರ್ಗನ್ ಡಿಸ್‌ಫಂಕ್ಷನ್ ಸಿಂಡ್ರೋಮ್ ಸಮಸ್ಯೆಯಿಂದ ಬಳಲುತ್ತಿದ್ದರು. ಇವರಲ್ಲಿ ಕೊರೋನ ಸೋಂಕು ಇರುವುದು ದೃಢಪಟ್ಟಿದ್ದು, ಶುಕ್ರವಾರ ಸಂಜೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News