ಹಣಕ್ಕಾಗಿ ಮಾರಕಾಸ್ತ್ರಗಳಿಂದ ಹಲ್ಲೆ: ಸಿಸಿಟಿಟಿಯಲ್ಲಿ ದೃಶ್ಯಾವಳಿ ಸೆರೆ

Update: 2020-07-04 18:23 GMT

ಬೆಂಗಳೂರು, ಜು.4: ಹಣದ ಆಸೆಗಾಗಿ ಉದ್ಯೋಗಿಯೊಬ್ಬರನ್ನು ಗುರಿಯಾಗಿಸಿಕೊಂಡು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಗೌರವ್ ಅಗರವಾಲ್ ಕೆಲಸ ಮುಗಿಸಿಕೊಂಡು ಸ್ನೇಹಿತರೊಂದಿಗೆ ಜೂ.27ರ ಮಧ್ಯರಾತ್ರಿ ತಾವರೆಕೆರೆ ಮುಖ್ಯರಸ್ತೆ ಭುವನಪ್ಪ ಲೇಔಟ್ ಬಳಿ ಹೋಗುತ್ತಿದ್ದರು. ಈ ವೇಳೆ ಎರಡು ಬೈಕ್‍ಗಳಲ್ಲಿ ಬಂದ ಮೂವರು ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ಹಣ ಕಸಿದುಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪ್ರತಿರೋಧ ವ್ಯಕ್ತಪಡಿಸಿದ್ದಕ್ಕೆ ದುಷ್ಕ್ಕರ್ಮಿಗಳು ಗೌರವ್ ಕೈ ಬೆರಳುಗಳಿಗೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳು ಪತ್ತೆಯಾಗಿವೆ. ಈ ಸಂಬಂಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News