ಮಂಗಳೂರು: ಬಂಗ್ಲಗುಡ್ಡೆಯಲ್ಲಿ ಭಾರೀ ಭೂಕುಸಿತ; ಇಬ್ಬರು ಮಣ್ಣಿನಡಿ ಸಿಲುಕಿರುವ ಶಂಕೆ

Update: 2020-07-05 09:55 GMT

ಬಂಟ್ವಾಳ, ಜು.5: ಗುರುಪುರ ಕೈಕಂಬದ ಬಂಗ್ಲಗುಡ್ಡೆ ಎಂಬಲ್ಲಿ ಗುಡ್ಡ ಕುಸಿತದಿಂದ ಎರಡು ಮನೆಗಳು ಧರೆಶಾಯಿಯಾಗಿದ್ದು ಇಬ್ಬರು ಮಣ್ಣಿನಡಿ ಸಿಲುಕಿದ್ದಾರೆ ಎಂದು ತಿಳಿದು ಬಂದಿದೆ. 

ಬಂಗ್ಲಗುಡ್ಡೆಯಲ್ಲಿ ಮಧ್ಯಾಹ್ನದ ವೇಳೆಗೆ ಉಂಟಾದ ಗುಡ್ಡ ಕುಸಿತದಿಂದ ಮನೆಯೊಂದು ಧರೆಶಾಯಿಯಾಗಿದೆ. ಒಂದು‌ ಮನೆ ಕುಸಿತದ ಬಳಿಕ ಆ ಮನೆಯ ಮೇಲಿನ ಭಾಗದಲ್ಲಿ ಇದ್ದ ಮತ್ತೊಂದು‌ ಮನೆಯೂ ಕುಸಿದಿದೆ. ಮೊದಲು ಧರೆಶಾಯಿಯಾದ ಮನೆಯಲ್ಲಿದ್ದ ಇಬ್ಬರು ಮಣ್ಣಿನಡಿ ಸಿಲುಕಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. 

ಕರಾವಳಿಯಲ್ಲಿ ಮೂರು ದಿನಗಳಿಂದ ಉತ್ತಮ ಮಳೆಯಾಗಿದ್ದು ಪರಿಣಾಮ ಗುಡ್ಡಕುಸಿತ ಉಂಟಾಗಿದೆ. ಮೊದಲು ಕುಸಿತಗೊಂಡ ಮನೆ ಮಂದಿ ಮನೆ ಕುಸಿತಗೊಳ್ಳುತ್ತಿದ್ದಂತೆ ಹೊರ ಓಡಿದ್ದು ಆದರೆ ಮನೆಯಲ್ಲಿ‌ ಮಲಗಿದ್ದ ಇಬ್ಬರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ. ಈ‌ ಮನೆಯ ಮೇಲಿನ ಭಾಗದಲ್ಲಿ ಇದ್ದ ಮನೆ ಮಂದಿಯೂ ಹೊರ ಓಡಿ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News