ಮಂಗಳೂರು: ಮಾಜಿ ಕೇಂದ್ರ ಸಚಿವರೊಬ್ಬರಿಗೆ ಕೊರೋನ ಪಾಸಿಟಿವ್
Update: 2020-07-05 10:10 GMT
ಬಂಟ್ವಾಳ, ಜು.5: ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ - 19 ಹಾಟ್ ಸ್ಪಾಟ್ ಎಂದು ಗುರುತಿಸಿರುವ ಬಂಟ್ವಾಳದಲ್ಲಿ ಸೋಂಕು ಪೀಡಿತರ ಸಂಖ್ಯೆ ಹೆಚ್ಚಳವಾಗುತ್ತಾ ಸಾಗಿದ್ದು, ತಾಲೂಕಿನಲ್ಲಿರುವ ಕೇಂದ್ರದ ಮಾಜಿ ಸಚಿವರೊಬ್ಬರು ಹಾಗೂ ಅವರ ಪತ್ನಿ, ಮಕ್ಕಳಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ಹೇಳಲಾಗಿದೆ.
ಈ ನಡುವೆ ಅವರ ಹಿರಿಯ ಪುತ್ರ ಸಾಮಾಜಿಕ ಜಾಲತಾಣದಲ್ಲಿ 'ತಂದೆ ಕ್ಷೇಮವಾಗಿದ್ದಾರೆ' ಎಂದು ತಿಳಿಸಿದ್ದಾರೆ. ತಂದೆಗೆ ಶನಿವಾರ ಕೋವಿಡ್ ತಪಾಸಣೆ ನಡೆಸಲಾಗಿದ್ದು ವರದಿ ಪಾಸಿಟಿವ್ ಬಂದಿದೆ. ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಕ್ಷೇಮವಾಗಿದ್ದು ಕೊರೋನ ಸಂಬಂಧಿಸಿ ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.