ಕರ್ನಾಟಕದಲ್ಲಿಂದು 1,925 ಕೊರೋನ ಪ್ರಕರಣಗಳು ಪತ್ತೆ: 37 ಮಂದಿ ಸಾವು

Update: 2020-07-05 15:49 GMT

ಬೆಂಗಳೂರು, ಜು.5: ಕರ್ನಾಟಕದಲ್ಲಿ ಕೊರೋನ ವೈರಸ್ ತೀವ್ರಗತಿಯಲ್ಲಿ ಏರುತ್ತಿದ್ದು, ಜನರಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಕಳೆದ ಕೆಲ ದಿನಗಳಿಂದ ದೈನಂದಿನ ಸಾವಿರಕ್ಕೂ ಅಧಿಕ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ.

ಶನಿವಾರ ಸಂಜೆಯಿಂದ ರವಿವಾರ ಸಂಜೆವರೆಗೆ ರಾಜ್ಯದಲ್ಲಿ 1,925 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 23,474 ಕ್ಕೆ ಏರಿಕೆಯಾಗಿದೆ. 

ಕಳೆದ 24 ಗಂಟೆಗಳಲ್ಲಿ 37 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದುವರೆಗೆ ಅತೀ ಹೆಚ್ಚಿನ ಕೊರೋನ ಸಾವು ಪ್ರಕರಣ ದಾಖಲಾದ ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು 16 ಮಂದಿ ಸಾವನ್ನಪ್ಪಿದ್ದಾರೆ. ಉಳಿದಂತೆ ಬೀದರ್ 9, ಬೆಳಗಾವಿ 2, ದಾವಣಗೆರೆ 2, ಕಲಬುರಗಿ 2, ಬಳ್ಳಾರಿ, ಚಿಕ್ಕಬಳ್ಳಾಪುರ, ಹಾಸನ, ಮೈಸೂರು, ಧಾರವಾಡ ಮತ್ತು ತುಮಕೂರು ಜಿಲ್ಲೆಯಲ್ಲಿ ತಲಾ ಒಂದು ಸಾವು ಸಂಭವಿಸಿದೆ. ಈ ಮೂಲಕ ಸಾವಿನ ಸಂಖ್ಯೆ 372ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. 

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 1235, ದಕ್ಷಿಣ ಕನ್ನಡ 147, ಬಳ್ಳಾರಿ 90, ವಿಜಯಪುರ 51, ಕಲಬುರಗಿ 49, ಉಡುಪಿ 45, ಧಾರವಾಡ 45, ಬೀದರ್ 29, ಮೈಸೂರು 25, ಕೊಪ್ಪಳ 22, ಉತ್ತರ ಕನ್ನಡ 21,ಚಾಮರಾಜನಗರ 19, ಹಾವೇರಿ 15, ಹಾಸನ 14, ಚಿಕ್ಕಬಳ್ಳಾಪುರ 13, ತುಮಕೂರು 13, ಕೋಲಾರ 13, ಬೆಳಗಾವಿ 11, ದಾವಣಗೆರೆ 11, ರಾಯಚೂರು 10, ಮಂಡ್ಯ 10, ಚಿಕ್ಕಮಗಳೂರು 9, ಶಿವಮೊಗ್ಗ 8, ಗದಗ 7, ರಾಮನಗರ 6, ಬಾಗಲಕೋಟೆ 4 ಮತ್ತು ಚಿತ್ರದುರ್ಗದಲ್ಲಿ 3 ಪ್ರಕರಣ ಪಾಸಿಟಿವ್ ಬಂದಿದೆ. 

ಒಟ್ಟಾರೆ ರಾಜ್ಯದಲ್ಲಿ 23,474 ಕೊರೋನ ಸೋಂಕಿತರ ಪೈಕಿ 9,847 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 603 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 372 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 13,251 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ರವಿವಾರ ಒಟ್ಟು 16,899 ಮಾದರಿಗಳನ್ನು ತಪಾಸಣೆ ನಡೆಸಲಾಗಿದ್ದು, ಅದರಲ್ಲಿ 14,649 ಮಾದರಿಗಳು ನೆಗೆಟಿವ್ ಬಂದಿದೆ. ಇನ್ನು 53803 ಜನರ ಮೇಲೆ ನಿಗಾವಣೆಯಲ್ಲಿಡಲಾಗಿದ್ದು, ಆ ಪೈಕಿ 30354 ಪ್ರಥಮ ಸಂಪರ್ಕಿತರು ಹಾಗೂ 23449 ದ್ವಿತೀಯ ಸಂಪರ್ಕಿತರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News