ಕಾರ್ಕಳ: ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

Update: 2020-07-05 15:23 GMT

ಕಾರ್ಕಳ, ಜು.5: ಬಾವಿಯಿಂದ ನೀರನ್ನು ಸೇದುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಜು.4ರಂದು ಸಂಜೆ 4ಗಂಟೆ ಸುಮಾರಿಗೆ ಸಾಣೂರು ಗ್ರಾಮದ ಕೆಳಗಿನ ಬಾವದ ಬಳಿ ನಡೆದಿದೆ.

ಮೃತರನ್ನು ಕೆಳಗಿನ ಬಾವದ ಬಳಿ ನಿವಾಸಿ ಸತೀಶ್ ಆಚಾರ್ಯ(45) ಎಂದು ಗುರುತಿಸಲಾಗಿದೆ. ಕಳೆದ ಕೆಲವು ವರ್ಷಗಳಿಂದ ಪಿಡ್ಸ್ ಕಾಯಿಲೆಯಿಂದ ಬಳಲುತ್ತಿದ್ದ ಇವರು ಮನೆಯ ಸಮೀಪದ ಶಂಕರ ಶೆಟ್ಟಿ ಎಂಬವರ ಬಾವಿಯಿಂದ ನೀರನ್ನು ಸೇದುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News