ವಿಕಲಚೇತನರ ಸ್ಪರ್ಧಾತ್ಮಕ ತರಬೇತಿಗೆ ಅರ್ಜಿ ಆಹ್ವಾನ

Update: 2020-07-05 17:08 GMT

ಉಡುಪಿ, ಜು.5: ಉಡುಪಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲೆಯ ಅಂಗವಿಕಲರಿಗಾಗಿ, ಸರಕಾರ ಅನುಷ್ಟಾನಗೊಳಿಸಿರುವಯೋಜನೆಗಳಿಗಾಗಿ ಅಹರಿರ್ಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಿದ್ಯಾರ್ಥಿವೇತನ ಮತ್ತು ಪ್ರತಿಭಾ ಪ್ರೋತ್ಸಾಹಧನ, ಉನ್ನತ ಶಿಕ್ಷಣ ಪಡೆಯು ತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್, ಅಂಗವಿಕಲರ ದೈನಂದಿನ ಚಟುವಟಿಕೆಗಳಿಗೆ ಅಗತ್ಯವಿರುವ ಸಾಧನ ಸಲಕರಣೆ, ನಿವಾರಣಾ ಶಸ್ತ್ರಚಿಕಿತ್ಸೆಗೆ ವೈದ್ಯಕೀಯ ನೆರವು, ವಿಕಲಚೇತನರ ಬಸ್ ಪಾಸ್, ಸ್ವಯಂ ಉದ್ಯೋಗಕ್ಕಾಗಿ ಶೇ50ರಷ್ಟು ಬ್ಯಾಂಕ್ ಸಾಲ ಮತ್ತು ಶೇ.50ರಷ್ಟು ಸಬ್ಸಿಡಿ ಮೂಲಕ ಆಧಾರ ಸಾಲ ಯೋಜನೆ, ಯಂತ್ರಚಾಲಿತ ದ್ವಿಚಕ್ರವಾಹನ, ವಿಕಲಚೇತನ ವ್ಯಕ್ತಿಯನ್ನು ವಿವಾಹವಾಗುವ ಸಾಮಾನ್ಯ ವ್ಯಕ್ತಿಗೆ ವಿವಾಹ ಪ್ರೋತ್ಸಾಹಧನ, ಅಂಧ ಮಹಿಳೆಗೆ ಜನಿಸುವ ಮೊದಲನೇ ಮತ್ತು 2ನೇ ಮಗುವಿನ ಪಾಲನೆಗಾಗಿ ಶಿಶುಪಾಲನಾ ಭತ್ಯೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಸ್ಪರ್ಧಾ ಚೇತನ ಯೋಜನೆಗಳ ಷರತ್ತುಗಳಂತೆ 2020-21ನೇ ಸಾಲಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಯೋಜನೆಗಳ ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0820-2574810/811ಕ್ಕೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ. ಅಲ್ಲದೇ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, ತಳಮಹಡಿ, ಸಿಂಡಿಕೇಟ್ ಬ್ಯಾಂಕ್ ಹತ್ತಿರ, ಜಿಲ್ಲಾಪಂಚಾಯತ್ ವಿಭಾಗ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಂಪರ್ಕಿಸ ಬಹುದು ಎಂದು ಉಡುಪಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಚಂದ್ರ ನಾಯ್ಕ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News