ಕೊರೋನ ಸೋಂಕಿತ ಮೃತ್ಯು: ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಾಧ್ಯವಾಗದೆ ಕಣ್ಣೀರಿಟ್ಟ ಕುಟುಂಬಸ್ಥರು
Update: 2020-07-05 17:29 GMT
ಬೆಂಗಳೂರು, ಜು.5: ಕೊರೋನ ಸೋಂಕಿಗೆ ಬಲಿಯಾದವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಾಧ್ಯವಾಗದ ಹಿನ್ನೆಲೆ ಕುಟುಂಬಸ್ಥರು ಸಂಕಟದಿಂದ ಕಣ್ಣೀರು ಹಾಕಿರುವ ಘಟನೆ ನಗರದಲ್ಲಿ ನಡೆದಿದೆ.
ಇತ್ತೀಚೆಗೆ ಕುರುಬರಹಳ್ಳಿಯ 60 ವರ್ಷದ ವ್ಯಕ್ತಿಯೊಬ್ಬರು ಕೊರೋನ ಸೋಂಕಿನಿಂದ ಅಸುನೀಗಿದ್ದರು. ಹೀಗಾಗಿ ಸೋಂಕಿನಿಂದ ಮೃತಪಟ್ಟ ವೃದ್ಧನ ಅಂತ್ಯ ಸಂಸ್ಕಾರವನ್ನ ಸುಮನಹಳ್ಳಿಯ ಚಿತಾಗಾರದಲ್ಲಿ ನೆರವೇರಿಸಲು ಬಿಬಿಎಂಪಿ ಅಧಿಕಾರಿಗಳು ಮುಂದಾಗಿದ್ದರು.
ಈ ಮಧ್ಯೆ ತನ್ನ ತಂದೆಯ ಮುಖವನ್ನ ಕೊನೆಯ ಬಾರಿ ನೋಡಲಾಗದೆ ಅವರ ಮಗ ಸಂಕಟದಿಂದ ಕಣ್ಣೀರಿಟ್ಟ ದೃಶ್ಯ ಮನಕಲಕುವಂತಿತ್ತು. ಅತ್ತ ತಂದೆಯ ಮೃತದೇಹಕ್ಕೆ ಅಗ್ನಿಸ್ಪರ್ಶ ಮಾಡಲಾಗಿದೆ ಮಗ ರೋಧಿಸುತ್ತಿದ್ದರೆ ಇತ್ತ ಮೃತನ ಪತ್ನಿಗೂ ಸೋಂಕು ಇದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಹಾಗಾಗಿ ಅವರಿಗೂ ಅಂತಿಮ ದರ್ಶನ ಪಡೆಯಲು ಸಾಧ್ಯವಾಗಲಿಲ್ಲ. ಆಸ್ಪತ್ರೆಯಲ್ಲೇ ವಿಷಯ ತಿಳಿದ ಮೃತನ ಹೆಂಡತಿ ಪತಿಯ ಮುಖ ನೋಡಲಾಗದೆ ಬಿಕ್ಕಿಬಿಕ್ಕಿ ಅತ್ತಿದ್ದಾರೆ.