ಗುರುಪುರ ಗುಡ್ಡ ಕುಸಿತ ಪ್ರಕರಣ: ಎಸ್.ವೈ.ಎಸ್. ಸಂತಾಪ

Update: 2020-07-06 07:01 GMT

ಮಂಗಳೂರು: ಗುರುಪುರ-ಕೈಕಂಬ ಬಂಗ್ಳ‌ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಇಬ್ಬರು ಮಕ್ಕಳು ಮೃತಪಟ್ಟ ಘಟನೆಗೆ ಕರ್ನಾಟಕ ರಾಜ್ಯ ಸುನ್ನೀ ಯುವಜನ‌ ಸಂಘ (ಎಸ್.ವೈ.ಎಸ್.) ತೀವ್ರ ಸಂತಾಪ ಮತ್ತು ಆಘಾತ ವ್ಯಕ್ತಪಡಿಸಿದೆ.

ಘಟನಾ ಸ್ಥಳದಲ್ಲಿ ಅಧಿಕಾರಿಗಳು‌, ಇಸಾಬಾ‌ ತಂಡದ ಸಮೇತ ಇತರ ಸ್ವಯಂಸೇವಕರು ಮತ್ತು ಸ್ಥಳೀಯರು ನಡೆಸಿದ ಕಾರ್ಯಾಚರಣೆಗಳನ್ನು ಸಂಘಟನೆ ಶ್ಲಾಘಿಸಿದೆ. ಮಾನ್ಯ ಮುಖ್ಯಮಂತ್ರಿಗಳು ಘೋಷಿಸಿದ ಪರಿಹಾರ ಮೊತ್ತವನ್ನು ಹೆಚ್ಚಿಸಬೇಕು, ಸಂತ್ರಸ್ತರ ಪುನರ್ವಸತಿಗೆ ಅಗತ್ಯವಾದ ತುರ್ತು ಕೆಲಸಗಳನ್ನು ಜನಪ್ರತಿನಿಧಿಗಳು ‌ಶೀಘ್ರವಾಗಿ ಕೈಗೊಳ್ಳಬೇಕೆಂದೂ ಸಂಘಟನೆ ಮನವಿ ಮಾಡಿದೆ.

ಸಂತ್ರಸ್ತರಿಗೆ ಅಗತ್ಯವಾದ ನೆರವು ನೀಡಲು ಎಲ್ಲರೂ ಮುಂದೆ ಬರಬೇಕೆಂದು ಎಸ್.ವೈ.ಎಸ್.ರಾಜ್ಯಾಧ್ಯಕ್ಷ ಉಸ್ಮಾನ್ ಸ'ಅದಿ ಪಟ್ಟೋರಿ, ಕಾರ್ಯದರ್ಶಿ ಎಮ್ಮೆಸ್ಸೆಂ ಝೈನೀ ಕಾಮಿಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News