ತುಮಕೂರಿನ ಶಾಸಕರೊಬ್ಬರಿಗೆ ಕೊರೋನ ಸೋಂಕು ದೃಢ
Update: 2020-07-06 07:33 GMT
ಬೆಂಗಳೂರು, ಜು.6: ತುಮಕೂರಿನ ಶಾಸಕರೊಬ್ಬರಿಗೆ ಕೊರೋನ ಸೋಂಕು ದೃಢಪಟ್ಟಿದೆ. ರವಿವಾರ ಕೊರೋನ ಪರೀಕ್ಷೆಗೊಳಗಾಗಿದ್ದ ಅವರಿಗೆ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
"ಸಾಕಷ್ಟು ಎಚ್ಚರಿಕೆ ವಹಿಸಿದ ಬಳಿಕವೂ ಸೋಂಕು ತಗಲಿದೆ. ಆದ್ದರಿಂದ ಜನರು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ನಾನು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗುತ್ತಿದ್ದೇನೆ. ಕ್ಷೇತ್ರದ ಜನತೆ ನನ್ನ ಬಗ್ಗೆ ಚಿಂತಿಸುವುದು ಬೇಡ' ಎಂದು ಅವರು ಹೇಳಿದ್ದಾರೆ.
ಇವರ ಜತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಕೆಲವು ನಾಯಕರು ಕ್ವಾರಂಟೈನ್ ಆಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.