ಕೋವಿಡ್ ವಿರುದ್ಧದ ಹೋರಾಟಕ್ಕೆ ಸಿದ್ದರಾಮಯ್ಯ ಸಹಕರಿಸಲಿ: ಬಿ.ಶ್ರೀರಾಮುಲು

Update: 2020-07-06 12:43 GMT

ಬೆಂಗಳೂರು, ಜು.6: ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸರಕಾರಗಳ ಮೇಲೆ ಆರೋಪ ಮಾಡೋದಕ್ಕೂ ಮುನ್ನ, ತಾವು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೂ ಆರೋಪ ಮಾಡಿ, ಆರೋಪಿಗಳಾಗಿರುವ ನಿಮ್ಮ ಪಕ್ಷದ ‘ರಾಜ-ಮಹಾರಾಜ’ರ ಬಗ್ಗೆ ಗಮನ ಹರಿಸುವುದು ಒಳಿತಲ್ಲವೆ ಸಿದ್ದರಾಮಯ್ಯನವರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿರುಗೇಟು ನೀಡಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಸಿದ್ದರಾಮಯ್ಯನವರೇ, ನಾಡು ಸಂಕಷ್ಟದಲ್ಲಿದೆ. ಆನರು ಸಮಸ್ಯೆಯಲ್ಲಿದ್ದಾರೆ. ಕೊರೋನವನ್ನು ಗೆಲ್ಲಬೇಕಿದೆ. ಇದು ಕೆಲಸ ಮಾಡೋ ಸಮಯ. ನಾಡಿನ ಜನತೆಗೆ ಕೆಲಸ ಮಾಡಿ, ಕೆಲಸ ಮಾಡಲು ಬಿಡಿ. ನಿಮ್ಮಿಂದ ಇಷ್ಟು ಕನಿಷ್ಠ ಮಟ್ಟದ ಸಹಕಾರವನ್ನು ಜನತೆಯ ಪರವಾಗಿ ಕೇಳುತ್ತೇನೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News