ದಾವಣಗೆರೆ: ಲಾಕ್ಡೌನ್ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿದ ಮೇಯರ್ ವಿರುದ್ಧ ತಹಶೀಲ್ದಾರ್ ದೂರು
Update: 2020-07-06 12:44 GMT
ದಾವಣಗೆರೆ, ಜು.6: ಲಾಕ್ಡೌನ್ ನಡುವೆಯೂ ಮಾಸ್ಕ್ ಇಲ್ಲದೇ, ಅಂತರ ಕಾಯ್ದುಕೊಳ್ಳದೇ ಜನ್ಮದಿನ ಆಚರಿಸಿಕೊಂಡ ಮೇಯರ್ ಬಿ.ಜಿ. ಅಜಯಕುಮಾರ್ ಅವರ ವಿರುದ್ಧ ತಹಶೀಲ್ದಾರ್ ಎನ್.ಬಿ.ಗಿರೀಶ್ ಬಡಾವಣೆ ಠಾಣೆಗೆ ದೂರು ನೀಡಿದ್ದಾರೆ.
ಜಿಲ್ಲಾಧಿಕಾರಿ ಕರ್ಫ್ಯೂ ಆದೇಶ ಹೊರಡಿಸಿದ್ದರೂ ಜನರನ್ನು ಗುಂಪುಗೂಡಿಸಿಕೊಂಡು ಜನ್ಮದಿನ ಆಚರಿಸುವ ಮೂಲಕ ವಿಪತ್ತು ನಿರ್ವಹಣಾ ಕಾಯ್ದೆಯನ್ನು ಉಲ್ಲಂಘಿಸಿದ್ದರು. ನಾನು ಜಾಗಕ್ಕೆ ಭೇಟಿ ನೀಡಿದಾಗ ಯಾವುದೇ ಕುರುಹು ಸಿಕ್ಕಿಲ್ಲ. ಖಾಸಗಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿದ್ದನ್ನು ವೀಕ್ಷಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದೇನೆ' ಎಂದು ತಹಶೀಲ್ದಾರ್ ಎನ್.ಬಿ.ಗಿರೀಶ್ ತಿಳಿಸಿದ್ದಾರೆ.