ಸುಶಾಂತ್ ಸಿಂಗ್ ರಜಪೂತ್ ಸಾವು: ಮುಂಬೈ ಪೊಲೀಸರಿಗೆ ಹೇಳಿಕೆ ನೀಡಿದ ಸಂಜಯ್ ಲೀಲಾ ಬನ್ಸಾಲಿ

Update: 2020-07-06 17:52 GMT

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಚಿತ್ರ ನಿರ್ದೇಶಕ, ನಿರ್ಮಾಪಕ ಸಂಜಯ್ ಲೀಲಾ ಬನ್ಸಾಲಿ ಸೋಮವಾರ ಬಾಂದ್ರಾ ಪೊಲೀಸ್ ಠಾಣೆಗೆ ಭೇಟಿ ನೀಡಿ ಹೇಳಿಕೆ ನೀಡಿದರು. ಬನ್ಸಾಲಿ ತಮ್ಮ ಕಾನೂನು ತಂಡದೊಂದಿಗೆ ಠಾಣೆಗೆ ಆಗಮಿಸಿದರು.

ಬನ್ಸಾಲಿ ತಮ್ಮ ಚಿತ್ರಗಳಲ್ಲಿ ಸುಶಾಂತ್ ಗೆ ಪಾತ್ರಗಳನ್ನು ನೀಡಲು ಮುಂದಾಗಿದ್ದರು. ಆದರೆ ದಿನಾಂಕ ಸಮಸ್ಯೆಯಿಂದಾಗಿ ಜತೆಗೆ ಕಾರ್ಯನಿರ್ವಹಿಸುವುದು ಸಾಧ್ಯವಾಗಿರಲಿಲ್ಲ. ಸುಶಾಂತ್ ಸಿಂಗ್ ರಜಪೂತ್ (34) ಅವರು ಜೂನ್ 14ರಂದು ಬಾಂದ್ರಾದಲ್ಲಿರುವ ಅವರ ಮನೆಯಲ್ಲಿ ಸಾವಿಗೆ ಶರಣಾಗಿದ್ದರು. ಇದು ಆತ್ಮಹತ್ಯೆ ಎಂದು ಪೊಲೀಸರು ಹೇಳಿದ್ದರು.

ಹಿಂದಿಚಿತ್ರರಂಗದಲ್ಲಿ ಸ್ವಜನ ಪಕ್ಷಪಾತದ ಕಾರಣದಿಂದ ಚಿತ್ರಗಳು ಕೈತಪ್ಪಿದ ಬಗ್ಗೆ ಹತಾಶರಾಗಿ ಆತ್ಮಹತ್ಯೆಗೆ ಶರಣಾಗಿದ್ದರು ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು ಎಂಬ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಮಹಾರಾಷ್ಟ್ರ ಸರ್ಕಾರ ಆದೇಶಿಸಿತ್ತು.

ಈ ಸಾವು ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಈ ನಟನ ಪ್ರಕ್ಷುಬ್ಧ ಮನಃಸ್ಥಿತಿ ಬಗ್ಗೆ ಚಿತ್ರ ನಿರ್ಮಾಪಕ ಶೇಖರ್ ಕಪೂರ್ ಮಾಡಿದ ಪೋಸ್ಟ್ ಭಾರಿ ಗಮನ ಸೆಳೆದಿತ್ತು.

ಸುಶಾಂತ್ ಜತೆ ಕೊನೆಯ ಚಿತ್ರ ದಿಲ್ ಬಚಾರಾದಲ್ಲಿ ನಟಿಸಿದ್ದ ಸಂಜನಾ ಸಾಂಘಿ ಸೇರಿದಂತೆ ಪೊಲೀಸರು 28 ಮಂದಿಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ರಜಪೂತ್ ಅವರ ಆಪ್ತ ಸ್ನೇಹಿತ, ನಿರ್ದೇಶಕ ಮುಖೇಶ್ ಛಾಬ್ರಾ ಅವರ ಹೇಳಿಕೆಯನ್ನು ಈಗಾಗಲೇ ದಾಖಲಿಸಿಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News