ಪುತ್ತೂರು: ಆಸ್ಪತ್ರೆ ಡಯಾಲಿಸಿಸ್ ವ್ಯವಸ್ಥೆ ಸರಿಪಡಿಸಲು ಮನವಿ

Update: 2020-07-07 12:47 GMT

ಪುತ್ತೂರು: ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಘಟಕದಲ್ಲಿ ಬಡ ರೋಗಿಗಳನ್ನು ತೀರಾ ಅಮಾನವೀಯವಾಗಿ ನಡೆಸಿಕೊಳ್ಳುತ್ತಿದ್ದು, ಘಟಕದ ಸಿಬ್ಬಂದಿಗಳು ಬೇಕಾಬಿಟ್ಟಿಯಾಗಿ ವರ್ತಿಸುತ್ತಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಿ ಅಂತಹ ಸಿಬ್ಬಂದಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್‍ಡಿಪಿಐ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಮಂಗಳವಾರ ತಾಲೂಕು ಆರೋಗ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್‍ಡಿಪಿಐ ಕ್ಷೇತ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಬಾವು, ನಗರ ಸಮಿತಿ ಅಧ್ಯಕ್ಷ ಬಶೀರ್ ಕೂರ್ನಡ್ಕ, ಎಸ್‍ಡಿಟಿಯು ತಾಲೂಕು ಅಧ್ಯಕ್ಷ ಅಬ್ದುಲ್ ಹಮೀದ್ ಸಾಲ್ಮರ, ಎಸ್‍ಡಿಎಸಿಯು ಅಧ್ಯಕ್ಷ ಸಮೀರ್ ನಾಜೂಕ್, ಬಾತಿಷ ಬಡಕ್ಕೋಡಿ, ಉಬೈದ್ ಮರೀಲ್, ಅಝರ್ ಕೂರ್ನಡ್ಕ, ಆತೀಕ್ ಮರೀಲ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News