ಉಡುಪಿ: ಎಸೆಸೆಲ್ಸಿ ಮೌಲ್ಯಮಾಪನ; ನಿಷೇಧಾಜ್ಞೆ ಜಾರಿ

Update: 2020-07-07 13:48 GMT

ಉಡುಪಿ, ಜು.7: ಇತ್ತೀಚೆಗೆ ಮುಕ್ತಾಯಗೊಂಡ ಎಸೆಸೆಲ್ಸಿ ಪರೀಕ್ಷೆಯ ಮೌಲ್ಯಮಾಪನ ಕಾರ್ಯ ಜು.9ರಿಂದ ಪ್ರಾರಂಭವಾಗಿ 18ರವರೆಗೆ ಉಡುಪಿ ಜಿಲ್ಲೆಯ ಆರು ಕೇಂದ್ರಗಳಲ್ಲಿ ನಡೆಯಲಿದೆ.

ಮೌಲ್ಯಮಾಪನ ಮುಗಿದು ಪ್ರಶ್ನೋತ್ತರ ಪತ್ರಿಕೆಗಳನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಲ್ಲೇಶ್ವರಂ ಬೆಂಗಳೂರು ಇಲ್ಲಿಗೆ ಸಾಗಿಸುವವರೆಗೆ ಜಿಲ್ಲೆಯ ಸಂಬಂಧಿಸಿದ ಮೌಲ್ಯ ಮಾಪನ ಕೇಂದ್ರಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ, ಮೌಲ್ಯಮಾಪನ ಕಾರ್ಯವು ಸುಸೂತ್ರವಾಗಿ ಮತ್ತು ದೋಷರತವಾಗಿ ನಡೆಸಲು ನಿಗದಿತ ಎಲ್ಲಾ ಮೌಲ್ಯಮಾಪನ ಕೇಂದ್ರಗಳ ಸುತ್ತಲಿನ 200ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಸೆಕ್ಷನ್ 144(1) ರಂತೆ ನಿಷೇದಾಜ್ಞೆಯನ್ನು ಜಾರಿಗೊಳಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News