ಕೊರೋನ ರೋಗಿಗಳಿಗೆ ಚಿಕಿತ್ಸೆ ನೀಡುವ ವಿಚಾರ: ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2020-07-07 16:37 GMT

ಬೆಂಗಳೂರು, ಜು.7: ರಾಜ್ಯದಲ್ಲಿ ಕೊರೋನ ರೋಗಿಗಳಿಗೆ ಚಿಕಿತ್ಸೆ ನೀಡುವ ಸಂಬಂಧ ರೋಗಿಗಳ ಚಿಕಿತ್ಸೆಗೆ ಲಭ್ಯವಿರುವ ಹಾಸಿಗೆಗಳೆಷ್ಟು ಹಾಗೂ ಚಿಕಿತ್ಸೆಗೆ ಯಾವ ಕ್ರಮಗಳನ್ನು ಕೈಗೊಂಡಿದ್ದಿರಿ ಎಂಬುದರ ಬಗ್ಗೆ ಮಾಹಿತಿ ನೀಡಲು ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ವಕೀಲೆ ಗೀತಾ ಮಿಶ್ರಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು.

ಕೊರೋನ ಹಿನ್ನೆಲೆಯಲ್ಲಿ ಎಷ್ಟು ಆ್ಯಂಬುಲೆನ್ಸ್ ಗಳನ್ನು ಸೇವೆಗೆ ಒದಗಿಸಲಾಗಿದೆ. ಶವಸಂಸ್ಕಾರಕ್ಕೆ ಅನುಸರಿಸುತ್ತಿರುವ ವಿಧಾನವೇನು. ಈ ಎಲ್ಲದರ ಬಗ್ಗೆ ವಿವರಣೆ ನೀಡುವಂತೆ ನ್ಯಾಯಪೀಠವು ಸೂಚನೆ ನೀಡಿ ವಿಚಾರಣೆಯನ್ನು ಜು.9ಕ್ಕೆ ಮುಂದೂಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News