ಮಡಿಕೇರಿ: ಭಾರೀ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ
Update: 2020-07-07 17:49 GMT
ಮಡಿಕೇರಿ, ಜು.7: ಸೋಮವಾರಪೇಟೆ ತಾಲೂಕಿನ ಕರ್ಕಳ್ಳಿ ಗ್ರಾಮದ ಕಟ್ಟೆ ಬಸವೇಶ್ವರ ದೇವಾಲಯದ ಸಮೀಪ ಭಾರೀ ಗಾಳಿ ಮಳೆಯಿಂದಾಗಿ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು, ಭಾರೀ ಅನಾಹುತ ತಪ್ಪಿದೆ.
ಸೋಮವಾರಪೇಟೆ ಪಟ್ಟಣದಿಂದ ಕರ್ಕಳ್ಳಿ, ಕೆಂಚಮ್ಮನ ಬಾಣೆ, ಬೇಳೂರು ಗ್ರಾಮಗಳಿಗೆ ತೆರಳುವ ಮಾರ್ಗ ಕರ್ಕಳ್ಳಿಯ ಕಟ್ಟೆ ಬಸವೇಶ್ವರ ದೇವಾಲಯದ ಪಕ್ಕದ ತೋಟವೊಂದರಲ್ಲಿ ಹಲವು ವರ್ಷಗಳಿಂದ ಬೆಳೆದು ನಿಂತಿದ್ದ ಬೃಹತ್ ಮರವನ್ನು ತೋಟದ ಮಾಲಕರು ತೆರವುಗೊಳಿಸದೇ ಇರುವುದು ಇದಕ್ಕೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.