ಉಡುಪಿ: ಬೆಳೆ ವಿಮೆ ಯೋಜನೆಯಡಿ ನೋಂದಣಿಗೆ ಆಹ್ವಾನ
ಉಡುಪಿ, ಜು.7: ಉಡುಪಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಮುಖ್ಯ ಬೆಳೆಯಾದ ಮಳೆಯಾಶ್ರಿತ ಭತ್ತವನ್ನು ಗ್ರಾಪಂ ಮಟ್ಟದಲ್ಲಿ ಬೆಳೆ ವಿಮೆ ಯೋಜನೆ ಯಡಿ ನೋಂದಣಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ.
ಮುಂಗಾರು ಹಂಗಾಮಿಗೆ ಅಧಿಸೂಚಿತ ಬೆಳೆಯ ರೈತರು ಬೆಳೆ ವಿಮೆ ಯೋಜನೆಯಡಿ ನೋಂದಣಿ ಮಾಡಿಸಿಕೊಳ್ಳಲು ಜು.31 ಕೊನೆಯ ದಿನವಾಗಿದೆ. ಬೆಳೆ ಸಾಲ ಪಡೆಯದ ರೈತರು ಪಹಣಿ ಪತ್ರ, ಖಾತೆ/ಪುಸ್ತಕ, ಕಂದಾಯ ರಸೀದಿ ಮತ್ತು ಆಧಾರ್ ಸಂಖ್ಯೆಗಳನ್ನು ಒದಗಿಸಿ ಸ್ಥಳೀಯ ಸಾಲ ನೀಡುವ ವಾಣಿಜ್ಯ ಅಥವಾ ಗ್ರಾಮೀಣ ಮಟ್ಟದ ವ್ಯವಸಾಯ ಸೇವಾ ಸಹಕಾರ ಸಂಘಗಳು, ಸಾರ್ವಜನಿಕ ಸೇವಾ ಕೇಂದ್ರ ಹಾಗೂ ಸಂಸ್ಥೆಗಳನ್ನು ಸಂಪರ್ಕಿಸಿ ಬೆಳೆ ವಿಮೆಗೆ ನೊಂದಾಯಿಸಿಕೊಳ್ಳಬಹುದು. ವಿಮಾ ಮೊತ್ತ ಪ್ರತೀ ಹೆಕ್ಟೇರ್ಗೆ 55,000 ರೂ. ಆಗಿದ್ದು, ವಿಮಾ ಕಂತಿನ ದರ ಪ್ರತೀ ಹೆಕ್ಟೇರ್ಗೆ 1,100 ಆಗಿದೆ.
ಹೆಚ್ಚಿನ ಮಾಹಿತಿಗಾಗಿ ಸ್ಥಳೀಯ ಕೃಷಿ ಇಲಾಖೆಯ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಉಡುಪಿ ಜಿಲ್ಲೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.