ಗುತ್ತಿಗೆ ಆಧಾರದಲ್ಲಿ ವೈದ್ಯರು/ತಜ್ಞರ ಹುದ್ದೆಗೆ ಅರ್ಜಿ ಆಹ್ವಾನ

Update: 2020-07-07 18:00 GMT

ಉಡುಪಿ, ಜು.7: ಕೊರೋನ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆ ಉಡುಪಿ ಹಾಗೂ ಸಾರ್ವಜನಿಕ ಆಸ್ಪತ್ರೆ ಕಾರ್ಕಳ ಹಾಗೂ ಕುಂದಾಪುರ ಇಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ವೈದ್ಯಕೀಯ ಸೇವೆಯನ್ನು ಒದಗಿಸಲು ಅಗತ್ಯವಿರುವ ಹುದ್ದೆಗಳಿಗೆ ತಾತ್ಕಾಲಿಕ ವಾಗಿ ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಜುಲೈ 10ರಂದು ಬೆಳಗ್ಗೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನರ ಕೊಠಡಿುಲ್ಲಿ ನೇರ ಸಂದರ್ಶನ ನಡೆಯಲಿದೆ.

ವೈದ್ಯರು/ತಜ್ಞರು ಹುದ್ದೆಗಳು: ಸರಕಾರದಿಂದ ಮಾನ್ಯತೆ ಪಡೆದ ವಿವಿಯಿಂದ ಪದವಿ ಹೊಂದಿರಬೇಕು. ಅರ್ಜಿಯೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗ ಬೇಕು. ವಿದ್ಯಾರ್ಹತೆ ಸಂಬಂಧಿಸಿ ಎಲ್ಲಾ ಅಂಕಪಟ್ಟಿಗಳ ಮೂಲ ಪ್ರತಿಗಳನ್ನು ನೇರ ಸಂದರ್ಶನಕ್ಕೆ ಬರುವಾಗ ತರಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸರ್ಜನರ ಮೊಬೈಲ್ ನಂ:9449843181 ಅಥವಾ 8310218759 (ಕಚೇರಿ) ಸಂಪರ್ಕಿಸಬಹುದು ಎಂದು ಉಡುಪಿ ಜಿಲ್ಲಾ ಶಸ್ತ್ರಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News