ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೊರೋನಗೆ ಮತ್ತೊಂದು ಸಾವು

Update: 2020-07-08 05:46 GMT

ಚಿಕ್ಕಮಗಳೂರು, ಜು.8: ನಗರದಲ್ಲಿ ಕೊರೋನ ವೈರಸ್ ಸೋಂಕು ತಗುಲಿರುವ 52 ವರ್ಷದ ಮಹಿಳೆಯೊಬ್ಬರು ಮೃತವಾಗಿರುವ ಬಗ್ಗೆ ವರದಿಯಾಗಿದೆ.

ಉಪ್ಪಳಿ ಬಡಾವಣೆಯ ಮಹಿಳೆ ಕೆಲವು ದಿನಗಳ ಹಿಂದೆ ಬೆಂಗಳೂರಿನಿಂದ ವಾಪಸ್ ಆಗಿದ್ದರು. ನಂತರ ಕೆಮ್ಮು, ಜ್ವರ, ಉಸಿರಾಟದ ತೊಂದರೆ ಕಾಣಿಸಿಕೊಂಡ ಕಾರಣ ಅವರ ಗಂಟಲು ದ್ರವ, ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿತ್ತು ವರದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿತ್ತು. ಬಳಿಕ ಮಹಿಳೆಯನ್ನು ಚಿಕ್ಕಮಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News