ಕಾಸರಗೋಡಿಗೆ ಕರ್ನಾಟಕದಿಂದ ಹಣ್ಣು, ತರಕಾರಿ ತರುವ ವಾಹನಗಳಿಗೆ ಪಾಸ್ ಕಡ್ಡಾಯ

Update: 2020-07-08 09:55 GMT
ಸಾಂದರ್ಭಿಕ ಚಿತ್ರ

ಕಾಸರಗೋಡು, ಜು.8: ಕರ್ನಾಟಕದಿಂದ ಕಾಸರಗೋಡು ಜಿಲ್ಲೆಗೆ ತರಕಾರಿ, ಹಣ್ಣುಹಂಪಲುಗಳನ್ನು ತರಲು ವಾಹನಗಳಿಗೆ ಪಾಸ್  ಕಡ್ಡಾಯಗೊಳಿಸಲಾಗಿದೆ.

ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕೊರೋನ ನಿಯಂತ್ರಣ ಸಮಿತಿಯ ಸಭೆ ಈ ತೀರ್ಮಾನ ತೆಗೆದುಕೊಂಡಿದೆ.

ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್.ಟಿ.ಒ) ಪಾಸ್ ಮಂಜೂರುಗೊಳಿಸಲಿದೆ. ವಾಹನ ಚಾಲಕ ಹಾಗೂ ಇತರ ಸಿಬ್ಬಂದಿ ಏಳು ದಿನಗಳಿಗೊಮ್ಮೆ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಒಳಗಾಗಿ ವೈದ್ಯಕೀಯ ಪ್ರಮಾಣ ಪತ್ರ ಪಡೆಯಬೇಕು ಎಂದು ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News