ರಾಜ್ಯದಲ್ಲಿ ಒಂದೇ ದಿನ 54 ಮಂದಿಯನ್ನು ಬಲಿ ಪಡೆದ ಕೊರೋನ: 2,062 ಮಂದಿಗೆ ಸೋಂಕು ದೃಢ

Update: 2020-07-08 15:02 GMT

ಬೆಂಗಳೂರು, ಜು.8: ಕರ್ನಾಟಕದಲ್ಲಿ ಕೊರೋನ ವೈರಸ್ ನಾಗಾಲೋಟ ಮುಂದುವರಿದಿದ್ದು, ಇಂದು ಒಂದೇ ದಿನ 54 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಅಲ್ಲದೇ, 2,062 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಮಂಗಳವಾರ ಸಂಜೆಯಿಂದ ಬುಧವಾರ ಸಂಜೆವರೆಗೆ ರಾಜ್ಯದಲ್ಲಿ ದೃಢಪಟ್ಟ 2,062 ಪ್ರಕರಣಗಳ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 28,877ಕ್ಕೆ ಏರಿಕೆಯಾಗಿದೆ. 54 ಸಾವಿನೊಂದಿಗೆ ಮೃತರ ಸಂಖ್ಯೆ 470ಕ್ಕೆ ಹೆಚ್ಚಳವಾಗಿದೆ.

ಇದುವರೆಗೆ ಅತೀ ಹೆಚ್ಚು ಸಾವು ಸಂಭವಿಸಿದ ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು 24 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಧಾರವಾಡದಲ್ಲಿ 7, ಬಳ್ಳಾರಿ 4, ರಾಯಚೂರು 3, ಹಾಸನ 3, ಮೈಸೂರು 2, ತುಮಕೂರು 2, ಚಿಕ್ಕಬಳ್ಳಾಪುರ 2, ವಿಜಯಪುರ 2, ದಕ್ಷಿಣ ಕನ್ನಡ, ಬೀದರ್, ಕಲಬುರಗಿ ಮತ್ತು ಚಿಕ್ಕಮಗಳೂರಿನಲ್ಲಿ ತಲಾ 1 ಒಂದು ಸಾವು ಸಂಭವಿಸಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 1,148, ದಕ್ಷಿಣ ಕನ್ನಡ 183, ಧಾರವಾಡ 89, ಕಲಬುರಗಿ 66, ಬಳ್ಳಾರಿ 59, ಮೈಸೂರು 59, ಬೆಂಗಳೂರು ಗ್ರಾಮಾಂತರ 37, ರಾಮನಗರ 34, ಚಿಕ್ಕಬಳ್ಳಾಪುರ 32, ಉಡುಪಿ 31, ಹಾವೇರಿ 31, ಬೀದರ್ 29, ಬೆಳಗಾವಿ 27, ಹಾಸನ 26, ತುಮಕೂರು 24, ಬಾಗಲಕೋಟೆ 24, ಚಿಕ್ಕಮಗಳೂರು 23, ಮಂಡ್ಯ 20, ಉತ್ತರ ಕನ್ನಡ 19, ದಾವಣಗೆರೆ 18, ರಾಯಚೂರು 17, ಶಿವಮೊಗ್ಗ 17, ಕೋಲಾರ 16, ಯಾದಗಿರಿ 11, ಕೊಪ್ಪಳ 11, ಗದಗ 5, ವಿಜಯಪುರ 4, ಚಿತ್ರದುರ್ಗದಲ್ಲಿ 2 ಪ್ರಕರಣ ಪಾಸಿಟಿವ್ ಬಂದಿದೆ. 

ಒಟ್ಟಾರೆ ರಾಜ್ಯದಲ್ಲಿ 28,877 ಕೊರೋನ ಸೋಂಕಿತರ ಪೈಕಿ 11,876 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 778 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 470 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 16,527 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News