ಕೋವಿಡ್-19: ಕಾತೂರ ಪಂಚಾಯತ್ ವ್ಯಾಪ್ತಿಯ ಅಂಗಡಿಗಳು ಸ್ವಯಂ ಪ್ರೇರಿತ ಬಂದ್

Update: 2020-07-08 15:06 GMT

ಮುಂಡಗೋಡ, ಜು 8 : ಗ್ರಾಮಾಂತರ ಪ್ರದೇಶಕ್ಕೂ ಕೊರೋನ ಹರಡುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಕಾತೂರ ಪಂಚಾಯತ್ ವ್ಯಾಪ್ತಿಯ ಗ್ರಾಮದ ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಯಿತು.

ಬಂದ್ ನಿಂದಾಗಿ ಕಾತೂರ ಬಸ್‍ಸ್ಟ್ಯಾಂಡ್ ಪ್ರದೇಶದಲ್ಲಿ ಜನರ ಸಂದಣಿ ಇಲ್ಲದೆ ಬಿಕೋ ಎನ್ನುತ್ತಿತ್ತು. ಗ್ರಾಮಸ್ಥರು ಕೃಷಿ ಚಟುವಟಿಕೆಗಳಿಗೆ ಹಾಗೂ  ಅವಶ್ಯಕ ಕೆಲಸಗಳಿಗೆ ಮಾತ್ರ ಹೊರಗೆ ಸಂಚರಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News