ನಗರಸಭೆ: ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಸಹಕರಿಸದಿದ್ದಲ್ಲಿ ಕ್ರಮ

Update: 2020-07-08 16:08 GMT

ಉಡುಪಿ, ಜು.8: ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ಬೆಳಗ್ಗೆ 5ರಿಂದ ರಾತ್ರಿ 8ರವರೆಗೆ ಉದ್ದಿಮೆಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದ್ದು, ರಾತ್ರಿ 8ರಿಂದ ಬೆಳಗ್ಗೆ 5ರವರೆಗೆ ಸಾರ್ವಜನಿಕರ ಸಂಚಾರವನ್ನು ನಿರ್ಭಂದಿಸಿದ್ದು, ಕರ್ಪ್ಯೂ ಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದಂತೆ ವ್ಯಕ್ತಿಗಳ ಚಲನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಮೇ 5ರ ರವಿವಾರದಿಂದ ಮುಂದಿನ ನಾಲ್ಕು ರವಿವಾರಗಳಂದು ಅಂದರೆ ಆಗಸ್ಟ್ 2ರವರೆಗಿನ ಎಲ್ಲಾ ರವಿವಾರದಂದು ಸಂಪೂರ್ಣ ಲಾಕ್‌ಡೌನ್ ಘೋಷಿಸಿದ್ದು ಎಲ್ಲಾ ಸಾರ್ವಜನಿಕರ ಓಡಾಟವನ್ನು ನಿರ್ಬಂಧಿಸಲಾಗಿದೆ. ಉಡುಪಿ ನಗರಸಭಾ ವ್ಯಾಪ್ತಿಯ ಎಲ್ಲಾ ಉದ್ದಿಮೆದಾರರು, ಅಂಗಡಿ ಮಳಿಗೆಗಳು, ಬಾರ್ ಮತ್ತು ರೆಸ್ಟೊರೆಂಟ್‌ಗಳು, ಹೋಟೆಲ್‌ಗಳು, ಬ್ಯಾಂಕ್ ಗಳು ಮತ್ತು ಮಾರುಕಟ್ಟೆಗಳಲ್ಲಿ ಮಾಲಕರು, ಸಿಬ್ಬಂದಿಗಳು ಮತ್ತು ಗ್ರಾಹಕರು ಕೋವಿಡ್-19 ಸಾಂಕ್ರಾಮಿಕ ರೋಗ ಸಮುದಾಯಕ್ಕೆ ಹರಡದಂತೆ ಸಹಕ ರಿಸಲು ಕಡ್ಡಾಯವಾಗಿ ಮಾಸ್ಕ್ ಧರಿಸಿ ಸುರಕ್ಷಿತಾ ಅಂತರ ಕಾಪಾಡಬೇಕು.

ಬಳಸಿದ ಮಾಸ್ಕ್‌ಗಳನ್ನು ಮರು ಬಳಕೆಯಾಗದಂತೆ ಕತ್ತರಿಸಿ ಯಾವುದೇ ಕಾಗದದಲ್ಲಿ ಸುತ್ತಿ ಪ್ರತ್ಯೇಕವಾಗಿ ನಗರಸಭೆಯ ಮನೆ ಮನೆ ಕಸ ಸಂಗ್ರಹಣೆಯ ವಾಹನಗಳಿಗೆ ನೀಡಬೇಕು. ಈ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ವಿಕೋಪ ಕಾಯ್ದೆ 2005, ಸಾಂಕ್ರಾುಕ ರೋಗಗಳ ಕಾಯ್ದೆ 1897, ಐ.ಪಿ.ಸಿ ಸೆಕ್ಷನ್ 188ರ ಅಡಿ ದಾಖಲಿ ಸಲಾಗುವುದು ಹಾಗೂ ಅಂಗಡಿಗಳ ಪರವಾನಿಗೆಯನ್ನು ರದ್ದುಪಡಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ನಗರಸಭೆಯ ಪೌರಾಯುಕ್ತ ಆನಂದ್ ಕಲ್ಲೋಳಿಕರ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News