ಮುಂಡಾಜೆ: ರಸ್ತೆಗೆ ಉರುಳಿದ ಮರ; ವಾಹನ ಸಂಚಾರಕ್ಕೆ ಅಡ್ಡಿ

Update: 2020-07-09 04:01 GMT

ಬೆಳ್ತಂಗಡಿ, ಜು.9: ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು- ಚಿಕ್ಕಮಗಳೂರು ರಸ್ತೆಯ ಮುಂಡಾಜೆಯ ಸೋಮಂತಡ್ಕ ಸಮೀಪ ರಸ್ತೆಗೆ ಅಡ್ಡಲಾಗಿ ಮರ ಬಿದ್ದು, ರಸ್ತೆ ಸಂಚಾರಕ್ಕೆ ಅಡ್ಡಿಯಾದ ಘಟನೆ ಗುರುವಾರ ಮುಂಜಾನೆ ನಡೆಯಿತು.

ಇಂದು ಮುಂಜಾನೆ ಸುಮಾರಿಗೆ 6:45ರ ಸುಮಾರಿಗೆ ಬೃಹದಾಕಾರದ ಮರ ರಸ್ತೆಗೆ ಉರುಳಿ ಬಿದ್ದಿದೆ. ಮರ ರಸ್ತೆಗೆ ಉರುಳಿರುವುದರಿಂದ ವಿದ್ಯುತ್ ತಂತಿಗಳಿಗೂ ಹಾನಿಯಾಗಿದೆ.

ಇದೇ ರಸ್ತೆಯ ಮೂಲಕ ಬೆಂಗಳೂರಿಗೆ ಸಂಚರಿಸುತ್ತಿದ್ದ ಕಾರ್ಕಳ‌ ಶಾಸಕ ಸುನೀಲ್ ಕುಮಾರ್ ಕೂಡಾ ರಸ್ತೆಗೆ ಮರ ಬಿದ್ದ ಕಾರಣ ಸಮಸ್ಯೆಗೆ ಸಿಲುಕಿಕೊಂಡರು. ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕಾಗಮಿಸಿ ಮರವನ್ನು ತೆರವು ಮಾಡಿದ್ದಾರೆ. ಮರ ಬಿದ್ದುದರಿಂದ ಸುಮಾರು ಒಂದು ತಾಸು ರಸ್ತೆ ಸಂಚಾರಕ್ಕೆ ಅಡ್ಡಿಯಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News