ಬಿಬಿಎಂಪಿ ಸದಸ್ಯರೊಬ್ಬರ ಅಣ್ಣನ ಮಗನ ಹತ್ಯೆ: ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ ಪೊಲೀಸರು

Update: 2020-07-09 11:38 GMT

ಬೆಂಗಳೂರು, ಜು.9: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯರೊಬ್ಬರ ಅಣ್ಣನ ಮಗನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಗ್ಗಲಿಪುರದ ಸೋಮನಹಳ್ಳಿ ಬಳಿ ನಡೆದಿದೆ.

ಮೃತನನ್ನು ಕಗ್ಗಲಿಪುರದ ನಿವಾಸಿ ವಿನೋದ್(35) ಎಂದು ಗುರುತಿಸಲಾಗಿದೆ. ಇವರು ಬಿಬಿಎಂಪಿ 196 ವಾರ್ಡ್ ಸದಸ್ಯ ಸೋಮಶೇಖರ್ ಅವರ ಅಣ್ಣನ ಮಗ. ಕಗ್ಗಲಿಪುರದ ಸೋಮನಹಳ್ಳಿ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. 

ವಿನೋದ್ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ ಎನ್ನಲಾಗುತ್ತಿದ್ದು ವೃತ್ತಿ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದೆಂದು ಪೋಲಿಸರು ಶಂಕೆ ವ್ಯಕ್ತಪಡಿಸಿದ್ದಾರೆ. 

ಪ್ರಕರಣ ದಾಖಲಿಸಿಕೊಂಡಿರುವ ಕಗ್ಗಲಿಪುರ ಠಾಣೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News