ಕರ್ನಾಟಕದಲ್ಲಿ ಇಂದು 2,228 ಮಂದಿಗೆ ಕೊರೋನ ಸೋಂಕು ದೃಢ, 17 ಸಾವು

Update: 2020-07-09 14:41 GMT

ಬೆಂಗಳೂರು, ಜು.9: ಕರ್ನಾಟಕದಲ್ಲಿ ಕೊರೋನ ವೈರಸ್ ನಾಗಾಲೋಟ ಮುಂದುವರಿದಿದ್ದು, ಇಂದು ಒಂದೇ ದಿನ 17 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಅಲ್ಲದೇ, 2,228 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬುಧವಾರ ಸಂಜೆಯಿಂದ ಗುರುವಾರ ಸಂಜೆವರೆಗೆ ರಾಜ್ಯದಲ್ಲಿ ದೃಢಪಟ್ಟ 2,228 ಪ್ರಕರಣಗಳ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 31,105ಕ್ಕೆ ಏರಿಕೆಯಾಗಿದೆ. 17 ಸಾವಿನೊಂದಿಗೆ ಮೃತರ ಸಂಖ್ಯೆ 486ಕ್ಕೆ ಹೆಚ್ಚಳವಾಗಿದೆ.

ಧಾರವಾಡದಲ್ಲಿ ಇಂದೂ ಕೂಡಾ 7 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಉಳಿದಂತೆ ಹಾಸನ 2, ಮೈಸೂರು 2, ಕಲಬುರಗಿ 2, ದಾವಣಗೆರೆ, ತುಮಕೂರು, ರಾಯಚೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 1 ಒಂದು ಸಾವು ಸಂಭವಿಸಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 1,373, ದಕ್ಷಿಣ ಕನ್ನಡ 167, ಕಲಬುರಗಿ 85, ಧಾರವಾಡ 75, ಮೈಸೂರು 52, ಬಳ್ಳಾರಿ 41, ದಾವಣಗೆರೆ 40, ಶಿವಮೊಗ್ಗ 37, ಬಾಗಲಕೋಟೆ 36, ಕೋಲಾರ 34, ಚಿಕ್ಕಬಳ್ಳಾಪುರ 32, ತುಮಕೂರು 27, ಮಂಡ್ಯ 24, ಉತ್ತರ ಕನ್ನಡ 23, ಉಡುಪಿ 22, ಹಾಸನ 21, ಹಾವೇರಿ 18, ರಾಮನಗರ 17, ರಾಯಚೂರು 16, ಯಾದಗಿರಿ 16, ಬೆಂಗಳೂರು ಗ್ರಾಮಾಂತರ 16, ಬೀದರ್ 15, ಚಾಮರಾಜನಗರ 12, ಬೆಳಗಾವಿ 9, ಗದಗ 6, ಚಿಕ್ಕಮಗಳೂರು 5, ಕೊಡಗು 4, ಕೊಪ್ಪಳ 2, ಚಿತ್ರದುರ್ಗ 2 ಮತ್ತು ವಿಜಯಪುರದಲ್ಲಿ 1 ಪ್ರಕರಣ ಪಾಸಿಟಿವ್ ಬಂದಿದೆ. 

ಒಟ್ಟಾರೆ ರಾಜ್ಯದಲ್ಲಿ 31,105 ಕೊರೋನ ಸೋಂಕಿತರ ಪೈಕಿ 12,833 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 957 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 486 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 17,782 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News