ಮಂಗಳೂರು: ಅನಾರೋಗ್ಯದಿಂದ ಯುವಕ ಸಾವು

Update: 2020-07-10 06:10 GMT

ಮಂಗಳೂರು, ಜು.10: ಸುರತ್ಕಲ್ ಹೊಸಬೆಟ್ಟುವಿನ ವ್ಯಕ್ತಿಯೊಬ್ಬರು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ನಾಲ್ಕು ದಿನಗಳ ಮೊದಲು ಶ್ವಾಸಕೋಶದ ತೊಂದರೆಯಿಂದ ಬಳಲಿದ್ದ ಇವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅಲ್ಲಿಂದ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿ ಜಾದೂ ಕಲಾವಿದರಾಗಿದ್ದರು. ಆನಂತರ ವಿದೇಶಕ್ಕೆ ತೆರಳಿ ಅಲ್ಲಿ ಉದ್ಯೋಗದ ಜತೆ ಜಾದೂ ಕಾರ್ಯಕ್ರಮ ನಡೆಸುತ್ತಿದ್ದರು. ಇತ್ತೀಚೆಗೆ ಸ್ವದೇಶಕ್ಕೆ ಮರಳಿದ ಇವರು ಇಲ್ಲಿ ಉದ್ಯೋಗವನ್ನು ಮಾಡುತ್ತಿದ್ದು, ಅದರ ಜತೆಗೆ ಜಾದೂವನ್ನು ಹವ್ಯಾಸವನ್ನಾಗಿ ಮಾಡಿಕೊಂಡಿದ್ದರು.

ಮೃತರು ಪತ್ನಿ ಮತ್ತು ಮಗುವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News