ಬೆಂಗಳೂರು ನಗರದಲ್ಲಿ ಹೆಚ್ಚಾಗುತ್ತಿರುವ ಕೊರೋನ: ಹೈಕೋರ್ಟ್ ಆತಂಕ

Update: 2020-07-10 12:31 GMT

ಬೆಂಗಳೂರು, ಜು.10: ಕೊರೋನ ಸೋಂಕು ಪ್ರತಿದಿನ ಹೆಚ್ಚಾಗುತ್ತಿದ್ದು, ಸಿಬ್ಬಂದಿಗಳೂ ಕಚೇರಿಗೆ ಬರಲು ಹಿಂಜರಿಯುತ್ತಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಕೊರೋನ ಹೆಚ್ಚಾಗುತ್ತಿದೆ ಎಂದು ಹೈಕೋರ್ಟ್ ಆತಂಕ ವ್ಯಕ್ತಪಡಿಸಿದೆ.

ಕೊರೋನದಿಂದ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.

ಅರ್ಜಿದಾರರ ಪರ ವಾದಿಸಿದ ವಕೀಲ ಕ್ಲಿಫ್ಟನ್ ಡಿ. ರೊಜಾರಿಯೊ ಅವರು, ಶ್ರಮಿಕ್ ರೈಲು ಸೇವೆ ಸ್ಥಗಿತಗೊಳಿಸಿರುವ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು. ಇದಕ್ಕೆ ನ್ಯಾಯಪೀಠ, ಕಾರ್ಮಿಕರು ಸಂಕಷ್ಟ ಸ್ಥಿತಿ ಎದುರಿಸುತ್ತಿದ್ದಾರೆ. ಹೀಗಾಗಿ, ಶ್ರಮಿಕ್ ರೈಲು ಸೇವೆ ನಿಲ್ಲಿಸುವ ನಿಲುವು ಮರುಪರಿಶೀಲನೆ ಮಾಡಬೇಕು ಎಂದು ಸೂಚಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News