ತಹಸೀಲ್ದಾರ್ ಹತ್ಯೆ ಖಂಡಿಸಿ ಕಂದಾಯ ಇಲಾಖೆ ನೌಕರರಿಂದ ಮೌನ ಪ್ರತಿಭಟನೆ

Update: 2020-07-10 13:35 GMT

ಪುತ್ತೂರು: ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಸೀಲ್ದಾರ್ ಚಂದ್ರಮೌಲೇಶ್ವರ ಅವರ ಹತ್ಯೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪುತ್ತೂರಿನ ಕಂದಾಯ ಇಲಾಖೆಯ ನೌಕರರು ಶುಕ್ರವಾರ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು. 

ಈ ಸಂದರ್ಭದಲ್ಲಿ ಪುತ್ತೂರು ಉಪವಿಭಾಗಾಧಿಕಾರಿ ಡಾ. ಯತೀಶ್ ಉಳ್ಳಾಲ್ ಮತ್ತು ತಹಸೀಲ್ದಾರ್ ರಮೇಶ್ ಬಾಬು ಅವರ ನೇತೃತ್ವದಲ್ಲಿ ಮೃತರಿಗೆ ಸಂತಾಪ ಸೂಚಿಸಲಾಯಿತು. 

ಉಪತಹಸೀಲ್ದಾರ್ ರಾಮಣ್ಣ ನಾಯ್ಕ್, ದಯಾನಂದ, ಶಶಿಕಲಾ, ಸುಲೋಚನಾ ಟಿ ಸೇರಿದಂತೆ ಇಲಾಖೆಯ ನೌಕರರು ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News