ಶಿವಮೊಗ್ಗ: ಕೊರೋನ ಸೋಂಕಿಗೆ ಮತ್ತೊಂದು ಬಲಿ

Update: 2020-07-11 06:44 GMT

ಶಿವಮೊಗ್ಗ, ಜು.11: ಶಿವಮೊಗ್ಗದಲ್ಲಿ ಕೊರೋನ ಅಟ್ಟಹಾಸ ಮುಂದುವರಿದಿದ್ದು, ಸೋಂಕಿತ ವೃದ್ಧೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ನಗರದ ಗಾಂಧಿ ಬಝಾರ್‌ನ 4ನೇ ತಿರುವಿನ ಧರ್ಮರಾಯನ ಟೆಂಪಲ್ ಕೇರಿಯ 90 ವರ್ಷದ ವೃದ್ಧೆ ಇಂದು ಕೊನೆಯುಸಿರೆಳೆದಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕೊರೋನ ಸೋಂಕಿಗೆ ಬಲಿಯಾದವರ ಒಟ್ಟು ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News