ಉಡುಪಿ: ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಜಿ ಅಹ್ವಾನ

Update: 2020-07-11 11:27 GMT

ಉಡುಪಿ, ಜು.11: 2020-21ನೇ ಸಾಲಿನ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ಹೆಚ್ಚಿನ ತರಬೇತಿ ಪಡೆಯಲು 2 ವರ್ಷದ ತರಬೇತಿಯನ್ನು ಆಯೋಜಿಸಲಾಗಿದ್ದು, ತರಬೇತಿ ಅವಧಿಗೆ ತಿಂಗಳಿಗೆ 10000 ರೂ. ಹಾಗೂ ಕಾನೂನು ವೃತ್ತಿಗೆ ಸಂಬಂಧಿಸಿದ ಪುಸ್ತಕಗಳ ಖರೀದಿಗೆ 5,000 ರೂ. ನೀಡುವ ಬಗ್ಗೆ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಂದ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ.

ಇದಕ್ಕಾಗಿ ಅರ್ಜಿ ಸಲ್ಲಿಸುವವರಿಗೆ ಆದಾಯ ಮಿತಿ ಎರಡು ಲಕ್ಷ ರೂ. ಆಗಿದೆ. ಅರ್ಜಿ ಪ್ರತಿಯನ್ನು ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ದಿ ಯೋಜನೆ, ಜಿಲ್ಲಾ ಸಂಕಿರ್ಣ, ಬಿ ಬ್ಲಾಕ್, ಎರಡನೇ ಮಹಡಿ, ರಜತಾದ್ರಿ ಮಣಿಪಾಲ ಇಲ್ಲಿಂದ ಪಡೆದು ಜುಲೈ 31ರೊಳಗೆ ಸಲ್ಲಿಸಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0820-2574814ನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News