ಪ್ರಬಂಧಕರಿಗೆ ಕೊರೋನ: ಬ್ಯಾಂಕ್ ಕಚೇರಿ ತಾತ್ಕಾಲಿಕ ಬಂದ್

Update: 2020-07-11 15:43 GMT

ಬೈಂದೂರು, ಜು.11: ಬೈಂದೂರು ಸಿಂಡಿಕೇಟ್ ಬ್ಯಾಂಕ್ ಮ್ಯಾನೇಜರ್‌ಗೆ ಇಂದು ಕೊರೋನ ಸೋಂಕು ದೃಢಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಬ್ಯಾಂಕ್ ಕಚೇರಿಯನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಎರಡು ದಿನಗಳ ಇವರಿಗೆ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಕರ್ತವ್ಯಕ್ಕೆ ರಜೆ ಮಾಡಿ, ಕೊರೋನ ಪರೀಕ್ಷೆಗೆ ಗಂಟಲು ದ್ರವ ನೀಡಿದ್ದರು. ಇದೀಗ ವರದಿಯಲ್ಲಿ ಪಾಸಿಟಿವ್ ಎಂಬುದಾಗಿ ಬಂದಿದೆ.

ಆದುದರಿಂದ ಬ್ಯಾಂಕ್ ಕಚೇರಿಯನ್ನು ತಾತ್ಕಾಲಿಕವಾಗಿ ಎರಡು ದಿನಗಳ ಕಾಲ ಬಂದ್ ಮಾಡಿ ಸ್ಯಾನಿಟೈಸ್ ಮಾಡಲಾಗಿದೆ. ಸೋಂಕಿತರನ್ನು ಕುಂದಾಪುರದ ಕೋವಿಡ್ -19 ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News