ಚಿರತೆ ದಾಳಿಗೆ 4 ವರ್ಷದ ಮಗು ಬಲಿ
Update: 2020-07-11 16:21 GMT
ತುಮಕೂರು, ಜು.11: ಜಿಲ್ಲೆಯಲ್ಲಿ ಚಿರತೆ ದಾಳಿಗೆ ನಾಲ್ಕು ವರ್ಷದ ಗಂಡು ಮಗು ಬಲಿಯಾಗಿರುವ ಘಟನೆ ಶನಿವಾರ ನಡೆದಿದೆ.
ಕುಣಿಗಲ್ ತಾಲೂಕು ಹುಲಿಯೂರು ದುರ್ಗ ಹೋಬಳಿ ರಾಜನಹಳ್ಳಿ ಗ್ರಾಮದ ಬುಡಕಟ್ಟು ನಿವಾಸಿ ಮುನಿರಾಜು ಎಂಬವರ ಮಗುವಿನ ಮೇಲೆ ಚಿರತೆ ದಾಳಿ ನಡೆಸಿದೆ.
ಚಂದ್ರು ಮೃತ ಮಗು. ಮನೆಯ ಆವರಣದಲ್ಲಿ ಆಟವಾಡುತ್ತಿದ್ದಾಗ ಚಿರತೆ ದಾಳಿ ನಡೆಸಿ ಹೊತ್ತೊಯ್ದಿದೆ. ಗ್ರಾಮಸ್ಥರು ರಕ್ಷಣೆಗೆ ಧಾವಿಸುವಷ್ಟರಲ್ಲಿ ಮಗು ಮೃತ ಪಟ್ಟಿದ್ದು, ಶವವನ್ನು ಬಿಟ್ಟು ಚಿರತೆ ಪರಾರಿಯಾಗಿದೆ ಎನ್ನಲಾಗಿದೆ.
ಇನ್ನು ತುಮಕೂರಿನಲ್ಲಿ ಚಿರತೆ ದಾಳಿ ಪ್ರಕರಣ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದ್ದು, ಕಳೆದ ಒಂದು ವರ್ಷದ ತಿಂಗಳ ಅವಧಿಯಲ್ಲಿ ಹಲವು ಪ್ರಕರಣಗಳು ವರದಿಯಾಗಿದೆ.