ಪತ್ರಕರ್ತರಿಗೆ ವಿಮೆ ಕಲ್ಪಿಸಲು ಸಿಎಂ ಜತೆ ಚರ್ಚಿಸಿ ನಿರ್ಧಾರ: ಸಚಿವ ಶ್ರೀರಾಮುಲು

Update: 2020-07-12 11:45 GMT

ಬೆಂಗಳೂರು, ಜು. 12: ಕೊರೋನ ಸೋಂಕಿನ ಸಂದರ್ಭದಲ್ಲಿ ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿರುವ ಪತ್ರಕರ್ತರಿಗೆ ವಿಮೆ ಅಗತ್ಯವಿರುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರಕ್ಕೆ ಬರಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಇಂದಿಲ್ಲಿ ಭರವಸೆ ನೀಡಿದ್ದಾರೆ.

ರವಿವಾರ ಟ್ವೀಟ್ ಮಾಡಿರುವ ಅವರು, ಕೆಲ ಪತ್ರಕರ್ತರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಹೀಗಾಗಿ ಎಲ್ಲ ಪತ್ರಕರ್ತರಿಗೆ ವಿಮೆ ಅಗತ್ಯವಿದೆ. ಈ ಸಂಬಂಧ ಸಿಎಂ ಜೊತೆಗೆ ಚರ್ಚಿಸಿ, ಪತ್ರಕರ್ತರ ಸಲಹೆಯನ್ನೂ ಪಡೆದು ಅನಂತರ ಸರಕಾರ ಸೂಕ್ತ ನಿರ್ಧಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News