ಸಿಬಿಎಸ್ ಪಠ್ಯಕ್ರಮದಲ್ಲಿ ಪ್ರಮುಖ ಪಠ್ಯ ಕ್ರಮ ಕೈ ಬಿಡದಿರಲು ಆಗ್ರಹ

Update: 2020-07-12 12:46 GMT

ಮಂಗಳೂರು,ಜು.12: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಆದೇಶದ ಮೇರೆಗೆ 9ನೇ ತರಗತಿಯಿಂದ 12ನೇ ತರಗತಿಯವರೆಗಿನ  ಪಠ್ಯಕ್ರಮದಿಂದ ಧರ್ಮ ನಿರಪೇಕ್ಷತೆ, ಒಕ್ಕೂಟ ವ್ಯವಸ್ಥೆ, ಮುಂತಾದ ಪ್ರಮುಖ ಅಧ್ಯಾಯಗಳನ್ನು ತೆಗೆದುಹಾಕುವ ಸಿಬಿಎಸ್‌ಇ ನಿರ್ಧಾರವನ್ನು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ  ಖಂಡಿಸುವುದಾಗಿ ಮತ್ತು ಈ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸುವುದಾಗಿ ಸಂಘಟನೆಯ ರಾಜ್ಯ ಸಮಿತಿ ಸದಸ್ಯ ರಾಜೇಶ್ ಭಟ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News