ರಾಜ್ಯದಲ್ಲಿ ಒಂದೇ ದಿನ 71 ಮಂದಿಯನ್ನು ಬಲಿ ಪಡೆದ ಕೋವಿಡ್: 2,627 ಮಂದಿಗೆ ಸೋಂಕು ದೃಢ

Update: 2020-07-12 16:00 GMT

ಬೆಂಗಳೂರು, ಜು.12: ಕರ್ನಾಟಕದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ವ್ಯಾಪಕ ಹೆಚ್ಚಳವಾಗುತ್ತಿದೆ. ಸೋಂಕಿತರು ಸಾವನ್ನಪ್ಪುತ್ತಿರುವ ಪ್ರಕರಣದಲ್ಲೂ ಏರಿಕೆಯಾಗುತ್ತಿದೆ. ಕೆಲ ದಿನಗಳಿಂದ ದೈನಂದಿನ 2 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. 

ಶನಿವಾರ ಸಂಜೆಯಿಂದ ರವಿವಾರ ಸಂಜೆವರೆಗೆ ಮತ್ತೆ 2,627 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 38,843ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 71 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 684ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಒಂದೇ ದಿನ 45 ಮಂದಿ ಸಾವನ್ನಪ್ಪಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡದಲ್ಲಿ 5, ಬೆಳಗಾವಿ 3, ಮೈಸೂರು 3, ದಾವಣಗೆರೆ 3, ಹಾಸನ 3, ಹಾವೇರಿ 2, ಬಾಗಲಕೋಟೆ 2, ತುಮಕೂರು, ಚಾಮರಾಜನಗರ, ಕೊಪ್ಪಳ ಮತ್ತು ವಿಜಯಪುರದಲ್ಲಿ ತಲಾ ಒಂದು ಸಾವು ಸಂಭವಿಸಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 1,525, ದಕ್ಷಿಣ ಕನ್ನಡ 196, ಧಾರವಾಡ 129, ಯಾದಗಿರಿ 120, ಕಲಬುರಗಿ 79, ಬಳ್ಳಾರಿ 63, ಬೀದರ್ 62, ರಾಯಚೂರು 48, ಉಡುಪಿ 43, ಮೈಸೂರು 42, ಶಿವಮೊಗ್ಗ 42, ಚಿಕ್ಕಬಳ್ಳಾಪುರ 39, ಹಾಸನ 31, ಕೊಪ್ಪಳ 27, ತುಮಕೂರು 26, ಕೋಲಾರ 24, ದಾವಣಗೆರೆ 20, ಬೆಂಗಳೂರು ಗ್ರಾಮಾಂತರ 19, ಕೊಡಗು 15, ಗದಗ 14, ಚಾಮರಾಜನಗರ 13, ಉತ್ತರ ಕನ್ನಡ 12, ಹಾವೇರಿ 12, ಚಿಕ್ಕಮಗಳೂರು 10, ಬಾಗಲಕೋಟೆ 7, ಮಂಡ್ಯ 4, ರಾಮನಗರ 3, ಬೆಳಗಾವಿಯಲ್ಲಿ 2 ಪ್ರಕರಣ ಪಾಸಿಟಿವ್ ಬಂದಿದೆ.

ರಾಜ್ಯದಲ್ಲಿ ಇಂದು 20,050 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಆ ಪೈಕಿ 16761 ಮಾದರಿಗಳು ನೆಗೆಟಿವ್ ಬಂದಿದೆ. ಒಟ್ಟಾರೆ 38,843 ಕೊರೋನ ಸೋಂಕಿತರ ಪೈಕಿ 15,409 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 693 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 684 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 22,746 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 532 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News