ರಾಜಕಾಲುವೆಯಲ್ಲಿ ಮಗು ಕೊಚ್ಚಿ ಹೋದ ಪ್ರಕರಣ: ತಾತ್ಕಾಲಿಕವಾಗಿ ಕಾರ್ಯಾಚರಣೆ ನಿಲ್ಲಿಸಿದ ಸಿಬ್ಬಂದಿ

Update: 2020-07-12 16:22 GMT

ಬೆಂಗಳೂರು, ಜು.12: ನಗರದ ಬೆಳ್ಳಂದೂರು ರಾಜ ಕಾಲುವೆಯಲ್ಲಿ ಕೊಚ್ಚಿ ಹೋಗಿರುವ ಮಗುವಿನ ರಕ್ಷಣಾ ಕಾರ್ಯಾಚರಣೆಯನ್ನು ಎನ್‍ಡಿಆರ್‍ಎಫ್ ಸಿಬ್ಬಂದಿ ತಾತ್ಕಾಲಿಕವಾಗಿ ಕೈಬಿಟ್ಟಿದ್ದಾರೆ.

ಕಾಲುವೆಯಲ್ಲಿ ತೀರಾ ಗಲೀಜು ಇರುವುದರಿಂದ ಶೋಧ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಹೀಗಾಗಿ ಎನ್‍ಡಿಆರ್‍ಎಫ್ ತಂಡ ಸೋಮವಾರ ಬೆಳಗ್ಗೆಯಿಂದ ಮತ್ತೆ ಕಾರ್ಯಾಚರಣೆಗೆ ಇಳಿಯಲಿದೆ ಎಂದು ತಿಳಿದು ಬಂದಿದೆ.

ಜು.13ರಿಂದ ಮತ್ತೆ ಎರಡು ವಿಶೇಷ ತಂಡದಿಂದ ಶೋಧಕಾರ್ಯ ನಡೆಯಲಿದೆ. ಅಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ಮಾರತಹಳ್ಳಿ ಬಳಿ ಕಾರ್ಯಾಚರಣೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News