ಪೌರ ಕಾರ್ಮಿಕರೊಂದಿಗೆ ಮಹಿಳೆ ಅಸಭ್ಯ ವರ್ತನೆ ಆರೋಪ: ಸ್ಪಷ್ಟನೆ ನೀಡುವಂತೆ ಬಿಬಿಎಂಪಿಗೆ ಪತ್ರ

Update: 2020-07-13 08:24 GMT

ಬೆಂಗಳೂರು, ಜು.12: ಇತ್ತೀಚಿಗೆ ಬಿಬಿಎಂಪಿ ಪೌರ ಕಾಮಿರ್ಕರೊಂದಿಗೆ ಮಹಿಳೆಯೊಬ್ಬಾಕೆ ಅಸಭ್ಯವಾಗಿ ವರ್ತಿಸಿದ ಆರೋಪ ಪ್ರಕರಣ ಸಂಬಂಧ ಸ್ಪಷ್ಟನೆ ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಅವರು ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

ಕೋವಿಡ್-19 ನೆಪದಲ್ಲಿ ಪೌರಕಾರ್ಮಿಕರಿಗೆ ಹತ್ತಿರ ಸೇರಿಸದೆ ನೀರನ್ನು ರಸ್ತೆಯಲ್ಲಿಟ್ಟ ಮಹಿಳೆಯೊಬ್ಬಾಕೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಬಳಿಕ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಆ ವಿಡಿಯೊ ಚಿತ್ರೀಕರಿಸಲಾಗಿದೆ ಎಂದು ಹೇಳಲಾಗಿದ್ದರೂ, ಈ ಘಟನೆ ತಿರುಚಿರುವ ಬಗ್ಗೆ ಹಾಸನದ ಸಾಮಾಜಿಕ ಹೋರಾಟಗಾರರು ದೂರು ಸಹ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಘಟನೆ ನಡೆದ ಸ್ಥಳ ತನಿಖೆ ನಡೆಸಿ, ಸಂಬಂಧಿಸಿದವರ ಹೇಳಿಕೆ ಪಡೆದು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವುದು. ಹಾಗೂ ಪೌರಕಾರ್ಮಿಕರ ಕೆಲಸ ನಡೆಸುವ ಸ್ಥಳಗಳಲ್ಲಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ ಹಾಗೂ ಮತ್ತಿತರ ವ್ಯವಸ್ಥೆ ಮಾಡಲು ಪತ್ರದಲ್ಲಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News