ಪತಿಯ ಅಗಲಿಕೆಯಿಂದ ಬೇಸತ್ತು ಗೃಹಿಣಿ ಆತ್ಮಹತ್ಯೆ

Update: 2020-07-12 17:11 GMT

ಮೈಸೂರು,ಜು.12: ಪತಿ ಅಗಲಿಕೆಯಿಂದ ಬೇಸತ್ತು ಗೃಹಿಣಿ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಜೆ.ಪಿ.ನಗರದಲ್ಲಿ ನಡೆದಿದೆ. 

ಮೃತ ಮಹಿಳೆಯನ್ನು ಚಾಂದಿನಿ (25) ಎಂದು ಹೇಳಲಾಗಿದೆ. 21 ದಿನಗಳ ಹಿಂದೆ ಇವರ ಪತಿ ಮಧುಸೂದನ್ ಮೃತ ಪಟ್ಟಿದ್ದರು. 5 ವರ್ಷಗಳ ಹಿಂದೆ ಚಾಂದಿನಿ ಹಾಗೂ ಮಧುಸೂದನ್ ವಿವಾಹ ನಡೆದಿತ್ತು. ಚಾಂದಿನಿಗೆ ಮತ್ತೊಂದು ಮದುವೆ ಮಾಡಲು ಪೋಷಕರು ನಿರ್ಧರಿಸಿದ್ದರು. ಆದರೆ ಪತಿ ನೆನಪಿನಿಂದ ಹೊರಬರಲಾಗದ ಚಾಂದಿನಿ ಪೋಷಕರ ನಿರ್ಧಾರಕ್ಕೆ ಬೇಸತ್ತು ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News